<blockquote>ಶ್ರೀಪಾದ್ ನಾಯ್ಕ್: ಬಿಜೆಪಿ</blockquote>.<p>ಉತ್ತರ ಗೋವಾ ಲೋಕಸಭಾ ಕ್ಷೇತ್ರವನ್ನು 25 ವರ್ಷಗಳಿಂದ ಪ್ರತಿನಿಧಿಸುತ್ತಿರುವ ಶ್ರೀಪಾದ್ ನಾಯ್ಕ್ ಅವರೇ ಈ ಬಾರಿಯೂ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಕೇಂದ್ರ ಪ್ರವಾಸೋದ್ಯಮ ಸಚಿವರಾಗಿರುವ ಇವರು ಸ್ಥಳೀಯವಾಗಿಯೂ ಪ್ರಭಾವಿ ಮುಖಂಡರಾಗಿದ್ದಾರೆ.</p><p> 2019ರ ಚುನಾವಣೆಯಲ್ಲಿ ಶ್ರೀಪಾದ್ ಅವರು, 80,247 ಮತಗಳ ಅಂತರದಿಂದ ಕಾಂಗ್ರೆಸ್ನ ಗಿರೀಶ್ ಚೋಡಂಕರ್ ಅವರನ್ನು ಸೋಲಿಸಿದ್ದರು. ಆರ್ಎಸ್ಎಸ್ ಹಿನ್ನೆಲೆಯಿಂದ ಬಂದಿರುವ ಶ್ರೀಪಾದ್ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಜನರ ಮುಂದಿರಿಸಿ ಮತಯಾಚಿಸುತ್ತಿದ್ದಾರೆ.</p><p>ಪಕ್ಷ ಸಂಘಟನೆಯ ಮೂಲಕವೂ ಚಿರಪರಿಚಿತರಾಗಿರುವ ಶ್ರೀಪಾದ್ ಅವರು ಈ ಬಾರಿಯೂ ಗೆದ್ದೇ ಗೆಲ್ಲುತ್ತಾರೆಂಬ ವಿಶ್ವಾಸ ಇಲ್ಲಿನ ಬಿಜೆಪಿ ಮುಖಂಡರಲ್ಲಿದೆ.</p>.<blockquote>ರಮಾಕಾಂತ್ ಖಲಪ್: ಕಾಂಗ್ರೆಸ್</blockquote>.<p>ಉತ್ತರ ಗೋವಾ ಕ್ಷೇತ್ರದಲ್ಲಿ ಭದ್ರವಾಗಿ ಬೇರೂರಿರುವ ಶ್ರೀಪಾದ್ ನಾಯ್ಕ್ ಅವರನ್ನು ಮಣಿಸಲು ಕಾಂಗ್ರೆಸ್ ಪಕ್ಷವು ಈ ಸಲ ಕೇಂದ್ರದ ಮಾಜಿ ಸಚಿವ ರಮಾಕಾಂತ್ ಖಲಪ್ ಅವರನ್ನು ಅಖಾಡಕ್ಕಿಳಿಸಿದೆ. ಗೋವಾದ ಮಾಜಿ ಉಪ ಮುಖ್ಯಮಂತ್ರಿಯಾಗಿರುವ ರಮಾಕಾಂತ್ ಅವರು, ‘ಮಹಾರಾಷ್ಟ್ರವಾದಿ ಗೋಮಾಂತಕ ಪಕ್ಷ’ದ ಮೂಲಕ ರಾಜಕೀಯ ಕ್ಷೇತ್ರಕ್ಕೆ ಕಾಲಿರಿಸಿದವರು. ಬಳಿಕ ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದರು.</p><p> ಅಲ್ಪ ಕಾಲ ಬಿಜೆಪಿಯಲ್ಲೂ ಇದ್ದರು. ಗೋವಾ ವಿಧಾನಸಭೆಯ ವಿರೋಧಪಕ್ಷದ ನಾಯಕರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು. 1996ರಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿರುವ ಕೀರ್ತಿ ಇವರಿಗೆ ಸಲ್ಲುತ್ತದೆ. ಈ ಬಾರಿ ಪಕ್ಷವು ‘ಇಂಡಿಯಾ’ ಒಕ್ಕೂಟದ ಜೊತೆಗಿರುವುದು, ರಮಾಕಾಂತ್ ಅವರ ಗೆಲುವಿನ ವಿಶ್ವಾಸವನ್ನು ಹೆಚ್ಚಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<blockquote>ಶ್ರೀಪಾದ್ ನಾಯ್ಕ್: ಬಿಜೆಪಿ</blockquote>.<p>ಉತ್ತರ ಗೋವಾ ಲೋಕಸಭಾ ಕ್ಷೇತ್ರವನ್ನು 25 ವರ್ಷಗಳಿಂದ ಪ್ರತಿನಿಧಿಸುತ್ತಿರುವ ಶ್ರೀಪಾದ್ ನಾಯ್ಕ್ ಅವರೇ ಈ ಬಾರಿಯೂ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಕೇಂದ್ರ ಪ್ರವಾಸೋದ್ಯಮ ಸಚಿವರಾಗಿರುವ ಇವರು ಸ್ಥಳೀಯವಾಗಿಯೂ ಪ್ರಭಾವಿ ಮುಖಂಡರಾಗಿದ್ದಾರೆ.</p><p> 2019ರ ಚುನಾವಣೆಯಲ್ಲಿ ಶ್ರೀಪಾದ್ ಅವರು, 80,247 ಮತಗಳ ಅಂತರದಿಂದ ಕಾಂಗ್ರೆಸ್ನ ಗಿರೀಶ್ ಚೋಡಂಕರ್ ಅವರನ್ನು ಸೋಲಿಸಿದ್ದರು. ಆರ್ಎಸ್ಎಸ್ ಹಿನ್ನೆಲೆಯಿಂದ ಬಂದಿರುವ ಶ್ರೀಪಾದ್ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಜನರ ಮುಂದಿರಿಸಿ ಮತಯಾಚಿಸುತ್ತಿದ್ದಾರೆ.</p><p>ಪಕ್ಷ ಸಂಘಟನೆಯ ಮೂಲಕವೂ ಚಿರಪರಿಚಿತರಾಗಿರುವ ಶ್ರೀಪಾದ್ ಅವರು ಈ ಬಾರಿಯೂ ಗೆದ್ದೇ ಗೆಲ್ಲುತ್ತಾರೆಂಬ ವಿಶ್ವಾಸ ಇಲ್ಲಿನ ಬಿಜೆಪಿ ಮುಖಂಡರಲ್ಲಿದೆ.</p>.<blockquote>ರಮಾಕಾಂತ್ ಖಲಪ್: ಕಾಂಗ್ರೆಸ್</blockquote>.<p>ಉತ್ತರ ಗೋವಾ ಕ್ಷೇತ್ರದಲ್ಲಿ ಭದ್ರವಾಗಿ ಬೇರೂರಿರುವ ಶ್ರೀಪಾದ್ ನಾಯ್ಕ್ ಅವರನ್ನು ಮಣಿಸಲು ಕಾಂಗ್ರೆಸ್ ಪಕ್ಷವು ಈ ಸಲ ಕೇಂದ್ರದ ಮಾಜಿ ಸಚಿವ ರಮಾಕಾಂತ್ ಖಲಪ್ ಅವರನ್ನು ಅಖಾಡಕ್ಕಿಳಿಸಿದೆ. ಗೋವಾದ ಮಾಜಿ ಉಪ ಮುಖ್ಯಮಂತ್ರಿಯಾಗಿರುವ ರಮಾಕಾಂತ್ ಅವರು, ‘ಮಹಾರಾಷ್ಟ್ರವಾದಿ ಗೋಮಾಂತಕ ಪಕ್ಷ’ದ ಮೂಲಕ ರಾಜಕೀಯ ಕ್ಷೇತ್ರಕ್ಕೆ ಕಾಲಿರಿಸಿದವರು. ಬಳಿಕ ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದರು.</p><p> ಅಲ್ಪ ಕಾಲ ಬಿಜೆಪಿಯಲ್ಲೂ ಇದ್ದರು. ಗೋವಾ ವಿಧಾನಸಭೆಯ ವಿರೋಧಪಕ್ಷದ ನಾಯಕರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು. 1996ರಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿರುವ ಕೀರ್ತಿ ಇವರಿಗೆ ಸಲ್ಲುತ್ತದೆ. ಈ ಬಾರಿ ಪಕ್ಷವು ‘ಇಂಡಿಯಾ’ ಒಕ್ಕೂಟದ ಜೊತೆಗಿರುವುದು, ರಮಾಕಾಂತ್ ಅವರ ಗೆಲುವಿನ ವಿಶ್ವಾಸವನ್ನು ಹೆಚ್ಚಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>