ಕಳೆದ ವರ್ಷ ಪಕ್ಷಕ್ಕೆ ಸೇರಿದ್ದ ಕೊತ್ತೂರು ಮಂಜುನಾಥ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಸಿದ್ಧವಿದೆ. ಆದರೆ, ಅವರಿಗೆ ಸಂಬಂಧಿಸಿದ ಜಾತಿ ಪ್ರಮಾಣಪತ್ರ ಪ್ರಕರಣ ನ್ಯಾಯಾಲಯದಲ್ಲಿದೆ. ಅಂತಿಮ ತೀರ್ಪು ಹೊರಬರುವವರೆಗೆ ಅವರು ಈ ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲದಂತಾಗಿದೆ. ಹೀಗಾಗಿ, ಅವರು ಸೂಚಿಸಿದ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡುವ ಸಾಧ್ಯತೆ ಇದೆ. ಅಂಜೂಬಾಸ್, ಎಸ್.ವೈ.ಶಾಂಭಯ್ಯ, ಮದ್ದೂರಪ್ಪ, ಮುದ್ದುವೆಂಕಟಪ್ಪ, ವೆಂಕಟಪ್ಪ, ಕಾರ್ ಶ್ರೀನಿವಾಸ್, ಗೊಲ್ಲಹಳ್ಳಿ ವೆಂಕಟೇಶ್ ಸೇರಿದಂತೆ 11 ಮಂದಿ ಆಕಾಂಕ್ಷಿಗಳಿದ್ದಾರೆ.