ಕಿಮ್ಮನೆ ರತ್ನಾಕರ್ ಕ್ಷೇತ್ರದ ಮಾಜಿ ಶಾಸಕರಾಗಿದ್ದು, ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ಆದರೆ, ಈ ಬಾರಿ ಟಿಕೆಟ್ ಕೊಡುವಂತೆ ಮಂಜುನಾಥ್ ಗೌಡ ಬೇಡಿಕೆ ಇಟ್ಟಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಿಮ್ಮನೆ ಅವರಿಗೆ ಚುನಾವಣಾ ಸಿದ್ಧತೆ ನಡೆಸುವಂತೆ ಮೌಖಿಕವಾಗಿ ಸೂಚಿಸಿದ್ದರು. ಅದರಂತೆ ಅವರು ಪ್ರಚಾರ ಆರಂಭಿಸಿದ್ದರು. ಆದರೆ, ಗೊಂದಲ ಕಾರಣದಿಂದಾಗಿ ಮೊದಲ ಪಟ್ಟಿಯಲ್ಲಿ ಕಿಮ್ಮನೆ ಹೆಸರು ಘೋಷಣೆ ಆಗಿರಲಿಲ್ಲ.