<p><strong>ಬೆಂಗಳೂರು:</strong> ‘ಮನುವಾದ ಪ್ರತಿಪಾದನೆಯೇ ಕೇಂದ್ರ ಸಚಿವ ಅನಂತಕುಮಾರ ಹೆಗಡೆಯಂಥವರ ಕೆಲಸ. ಇಂಥವರೇ ನಿಜವಾದ ಅಪರಾಧಿಗಳು’ ಎಂದು ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟರು.</p>.<p>‘ನಾಯಿ ಬೊಗಳಿದರೆ ತಲೆಕೆಡಿಸಿಕೊಳ್ಳುವ ಜನ ನಾವಲ್ಲ’ ಎಂದು ಪ್ರತಿಭಟನಾಕಾರನ್ನು (ದಲಿತ ಸಂಘಟನೆಗಳ ಕಾರ್ಯಕರ್ತರು) ಉದ್ದೇಶಿಸಿ ಹೆಗಡೆ ನೀಡಿದ ಹೇಳಿಕೆಗೆ ಭಾನುವಾರ ಇಲ್ಲಿ ಪ್ರತಿಕ್ರಿಯೆ ನೀಡಿದ ಖರ್ಗೆ, ‘ಹೆಗಡೆ ಬಾಯಿಂದ ಪ್ರಧಾನಿಯವರೇ ಈ ರೀತಿ ಹೇಳಿಸುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ಮೋದಿ ಮನಸ್ಸು ಮಾಡಿದ್ದರೆ ಇದನ್ನು ನಿಲ್ಲಿಸಬಹುದು. ಸಂಸತ್ ಕಲಾಪದಲ್ಲಿ ಈ ವಿಷಯ ಪ್ರಸ್ತಾಪಿಸುತ್ತೇನೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಜನರ ಹಕ್ಕು. ಪ್ರತಿಭಟನೆ, ಸತ್ಯಾಗ್ರಹ ಮಾಡುವುದು ಬೇಡ ಅಂದರೆ ಹೇಗೆ’ ಎಂದೂ ಪ್ರಶ್ನಿಸಿದರು.</p>.<p>ಕೊಳಕು ಮನಸ್ಥಿತಿ: ‘ದಲಿತರನ್ನು ಬೀದಿನಾಯಿಗಳಿಗೆ ಹೋಲಿಸುವಂಥ ಅನಂತಕುಮಾರ ಹೆಗಡೆ ಹೇಳಿಕೆ ಅತ್ಯಂತ ಕೊಳಕು ಮನಸ್ಥಿತಿ ಎತ್ತಿ ತೋರಿಸುತ್ತದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.</p>.<p>‘ಅನಂತಕುಮಾರ ಹೆಗಡೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ಮೋದಿಯ ವಕ್ತಾರ. ಉದ್ದೇಶಪೂರ್ವಕವಾಗಿಯೇ ಇಂಥ ಹೇಳಿಕೆ ನೀಡುವಂತೆ ಹೆಗಡೆಗೆ ಕುಮ್ಮಕ್ಕು ನೀಡಲಾಗುತ್ತಿದೆ’ ಎಂದರು.</p>.<p>‘ಪ್ರಧಾನಿ ಮೋದಿಯೇ ಅನಂತಕುಮಾರ ಹೆಗಡೆ ಅವರನ್ನು ಕೇಂದ್ರ ಸಚಿವ ಮಾಡಿದ್ದಾರೆ. ಈ ರೀತಿ ಹೇಳಿಕೆ ನೀಡಲೆಂದೇ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ’ ಎಂದೂ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮನುವಾದ ಪ್ರತಿಪಾದನೆಯೇ ಕೇಂದ್ರ ಸಚಿವ ಅನಂತಕುಮಾರ ಹೆಗಡೆಯಂಥವರ ಕೆಲಸ. ಇಂಥವರೇ ನಿಜವಾದ ಅಪರಾಧಿಗಳು’ ಎಂದು ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟರು.</p>.<p>‘ನಾಯಿ ಬೊಗಳಿದರೆ ತಲೆಕೆಡಿಸಿಕೊಳ್ಳುವ ಜನ ನಾವಲ್ಲ’ ಎಂದು ಪ್ರತಿಭಟನಾಕಾರನ್ನು (ದಲಿತ ಸಂಘಟನೆಗಳ ಕಾರ್ಯಕರ್ತರು) ಉದ್ದೇಶಿಸಿ ಹೆಗಡೆ ನೀಡಿದ ಹೇಳಿಕೆಗೆ ಭಾನುವಾರ ಇಲ್ಲಿ ಪ್ರತಿಕ್ರಿಯೆ ನೀಡಿದ ಖರ್ಗೆ, ‘ಹೆಗಡೆ ಬಾಯಿಂದ ಪ್ರಧಾನಿಯವರೇ ಈ ರೀತಿ ಹೇಳಿಸುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ಮೋದಿ ಮನಸ್ಸು ಮಾಡಿದ್ದರೆ ಇದನ್ನು ನಿಲ್ಲಿಸಬಹುದು. ಸಂಸತ್ ಕಲಾಪದಲ್ಲಿ ಈ ವಿಷಯ ಪ್ರಸ್ತಾಪಿಸುತ್ತೇನೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಜನರ ಹಕ್ಕು. ಪ್ರತಿಭಟನೆ, ಸತ್ಯಾಗ್ರಹ ಮಾಡುವುದು ಬೇಡ ಅಂದರೆ ಹೇಗೆ’ ಎಂದೂ ಪ್ರಶ್ನಿಸಿದರು.</p>.<p>ಕೊಳಕು ಮನಸ್ಥಿತಿ: ‘ದಲಿತರನ್ನು ಬೀದಿನಾಯಿಗಳಿಗೆ ಹೋಲಿಸುವಂಥ ಅನಂತಕುಮಾರ ಹೆಗಡೆ ಹೇಳಿಕೆ ಅತ್ಯಂತ ಕೊಳಕು ಮನಸ್ಥಿತಿ ಎತ್ತಿ ತೋರಿಸುತ್ತದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.</p>.<p>‘ಅನಂತಕುಮಾರ ಹೆಗಡೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ಮೋದಿಯ ವಕ್ತಾರ. ಉದ್ದೇಶಪೂರ್ವಕವಾಗಿಯೇ ಇಂಥ ಹೇಳಿಕೆ ನೀಡುವಂತೆ ಹೆಗಡೆಗೆ ಕುಮ್ಮಕ್ಕು ನೀಡಲಾಗುತ್ತಿದೆ’ ಎಂದರು.</p>.<p>‘ಪ್ರಧಾನಿ ಮೋದಿಯೇ ಅನಂತಕುಮಾರ ಹೆಗಡೆ ಅವರನ್ನು ಕೇಂದ್ರ ಸಚಿವ ಮಾಡಿದ್ದಾರೆ. ಈ ರೀತಿ ಹೇಳಿಕೆ ನೀಡಲೆಂದೇ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ’ ಎಂದೂ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>