ಶುಕ್ರವಾರ ಇಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆ ಉದ್ಘಾಟಿಸಿ ಅವರು ಮಾತನಾಡಿದರು. ‘ಹಸಿರು ಶಾಲು ಹಾಕಿಕೊಳ್ಳುವ ನೈತಿಕತೆ ನನಗೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಾರೆ. ಆದರೆ, ನಾನು ಮುಖ್ಯಮಂತ್ರಿ ಆಗಿ, ಅಧಿಕಾರ ಸ್ವೀಕಾರ ಮಾಡಿದ್ದೇ ಹಸಿರು ಶಾಲು ಧರಿಸಿ. ಈಗ ಅದೇ ಶಾಲು ಧರಿಸಿ ಮತ್ತೆ ಮುಖ್ಯಮಂತ್ರಿಯಾಗುತ್ತೇನೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.