<p><strong>ಕೊಪ್ಪಳ: </strong>ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕೊಪ್ಪಳ ಹಾಗೂ ಕುಕನೂರಿನಲ್ಲಿ ಇದೇ 10ರಂದು ನಡೆಯುವ ಎರಡು ಬಹಿರಂಗ ಸಮಾವೇಶಗಳಿಗೆ ಜನರನ್ನು ಕರೆತರಲು 500 ಬಸ್ಗಳನ್ನು ಬಳಸಲಾಗುತ್ತಿದೆ. ಇದಕ್ಕಾಗಿ ಕಾಂಗ್ರೆಸ್ ಪಕ್ಷವು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ₹ 55 ಲಕ್ಷವನ್ನು ಪಾವತಿಸಿದೆ.</p>.<p>‘ಎರಡೂ ಸಮಾವೇಶಗಳಿಗೆ ತಲಾ 250 ಬಸ್ಗಳನ್ನು ಒದಗಿಸಲಾಗುವುದು. ಪ್ರತಿ ಬಸ್ಗೆ ದಿನವೊಂದಕ್ಕೆ ₹11 ಸಾವಿರ ಬಾಡಿಗೆ ನಿಗದಿಪಡಿಸಲಾಗಿದೆ’ ಎಂದು ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಎಸ್. ಗದ್ದಿಕೇರಿ ತಿಳಿಸಿದರು.</p>.<p>ರಾಹುಲ್ ಭೇಟಿಗಾಗಿ ಸಿದ್ಧತೆಗಳು ನಡೆದಿವೆ. ಜಿಲ್ಲಾಡಳಿತ ಭವನದ ಬಳಿ ನಗರಕ್ಕೆ ಸ್ವಾಗತ ಕೋರುವ ನಗರಸಭೆಯ ಕಮಾನಿನ ಫಲಕವನ್ನು ಮರೆಮಾಚಿ, ಅದರ ಮೇಲೆ 'ನವ ಕರ್ನಾಟಕ ನಿರ್ಮಾಣಕ್ಕೆ ಸರ್ವರಿಗೂ ಸ್ವಾಗತ' ಎಂದು ಬರೆದಿರುವ ಬೃಹತ್ ಬ್ಯಾನರ್ ಅಳವಡಿಸಲಾಗಿದೆ.</p>.<p>‘ನಗರದ ಸಾರ್ವಜನಿಕ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 106 ಹಳ್ಳಿಗಳ ಜನ ಭಾಗವಹಿಸಲಿದ್ದಾರೆ. ಎಲ್ಲ ಹಳ್ಳಿಗಳಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಹುಬ್ಬಳ್ಳಿಯ ಏಜೆನ್ಸಿಯೊಂದು ಶಾಮಿಯಾನ, ಪ್ರಚಾರ ಫಲಕಗಳ ಅಳವಡಿಕೆ ಗುತ್ತಿಗೆ ಪಡೆದಿದೆ’ ಎಂದು<br /> ಜಿಲ್ಲಾ ಕಾಂಗ್ರೆಸ್ ವಕ್ತಾರ ಅಕ್ಬರ್ ಪಾಷಾ ಮಾಹಿತಿ ನೀಡಿದರು.</p>.<p>‘ಕುಕನೂರಿನ ಸಮಾವೇಶದಲ್ಲಿ 50 ಸಾವಿರ ಜನ ಭಾಗವಹಿಸಲಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ತಿಳಿಸಿದರು.</p>.<p><strong>ಅಂಕಿ–ಅಂಶ</strong></p>.<p>₹1.50 ಕೋಟಿ - ಕೊಪ್ಪಳದಲ್ಲಿ ರಾಹುಲ್ ಗಾಂಧಿ ಸಮಾವೇಶಕ್ಕೆ ತಗಲುವ ಒಟ್ಟು ವೆಚ್ಚ</p>.<p>60 ಸಾವಿರ - ಕೊಪ್ಪಳ ಸಮಾವೇಶದಲ್ಲಿ ಜನರನ್ನು ಸೇರಿಸುವ ಗುರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ: </strong>ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕೊಪ್ಪಳ ಹಾಗೂ ಕುಕನೂರಿನಲ್ಲಿ ಇದೇ 10ರಂದು ನಡೆಯುವ ಎರಡು ಬಹಿರಂಗ ಸಮಾವೇಶಗಳಿಗೆ ಜನರನ್ನು ಕರೆತರಲು 500 ಬಸ್ಗಳನ್ನು ಬಳಸಲಾಗುತ್ತಿದೆ. ಇದಕ್ಕಾಗಿ ಕಾಂಗ್ರೆಸ್ ಪಕ್ಷವು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ₹ 55 ಲಕ್ಷವನ್ನು ಪಾವತಿಸಿದೆ.</p>.<p>‘ಎರಡೂ ಸಮಾವೇಶಗಳಿಗೆ ತಲಾ 250 ಬಸ್ಗಳನ್ನು ಒದಗಿಸಲಾಗುವುದು. ಪ್ರತಿ ಬಸ್ಗೆ ದಿನವೊಂದಕ್ಕೆ ₹11 ಸಾವಿರ ಬಾಡಿಗೆ ನಿಗದಿಪಡಿಸಲಾಗಿದೆ’ ಎಂದು ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಎಸ್. ಗದ್ದಿಕೇರಿ ತಿಳಿಸಿದರು.</p>.<p>ರಾಹುಲ್ ಭೇಟಿಗಾಗಿ ಸಿದ್ಧತೆಗಳು ನಡೆದಿವೆ. ಜಿಲ್ಲಾಡಳಿತ ಭವನದ ಬಳಿ ನಗರಕ್ಕೆ ಸ್ವಾಗತ ಕೋರುವ ನಗರಸಭೆಯ ಕಮಾನಿನ ಫಲಕವನ್ನು ಮರೆಮಾಚಿ, ಅದರ ಮೇಲೆ 'ನವ ಕರ್ನಾಟಕ ನಿರ್ಮಾಣಕ್ಕೆ ಸರ್ವರಿಗೂ ಸ್ವಾಗತ' ಎಂದು ಬರೆದಿರುವ ಬೃಹತ್ ಬ್ಯಾನರ್ ಅಳವಡಿಸಲಾಗಿದೆ.</p>.<p>‘ನಗರದ ಸಾರ್ವಜನಿಕ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 106 ಹಳ್ಳಿಗಳ ಜನ ಭಾಗವಹಿಸಲಿದ್ದಾರೆ. ಎಲ್ಲ ಹಳ್ಳಿಗಳಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಹುಬ್ಬಳ್ಳಿಯ ಏಜೆನ್ಸಿಯೊಂದು ಶಾಮಿಯಾನ, ಪ್ರಚಾರ ಫಲಕಗಳ ಅಳವಡಿಕೆ ಗುತ್ತಿಗೆ ಪಡೆದಿದೆ’ ಎಂದು<br /> ಜಿಲ್ಲಾ ಕಾಂಗ್ರೆಸ್ ವಕ್ತಾರ ಅಕ್ಬರ್ ಪಾಷಾ ಮಾಹಿತಿ ನೀಡಿದರು.</p>.<p>‘ಕುಕನೂರಿನ ಸಮಾವೇಶದಲ್ಲಿ 50 ಸಾವಿರ ಜನ ಭಾಗವಹಿಸಲಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ತಿಳಿಸಿದರು.</p>.<p><strong>ಅಂಕಿ–ಅಂಶ</strong></p>.<p>₹1.50 ಕೋಟಿ - ಕೊಪ್ಪಳದಲ್ಲಿ ರಾಹುಲ್ ಗಾಂಧಿ ಸಮಾವೇಶಕ್ಕೆ ತಗಲುವ ಒಟ್ಟು ವೆಚ್ಚ</p>.<p>60 ಸಾವಿರ - ಕೊಪ್ಪಳ ಸಮಾವೇಶದಲ್ಲಿ ಜನರನ್ನು ಸೇರಿಸುವ ಗುರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>