ಮೈಸೂರಿನಲ್ಲಿ ಪ್ರಧಾನಿ ಮಾಡಿದ್ದ ಟೀಕೆಗೆ ತಿರುಗೇಟು ಕೊಟ್ಟಿರುವ ಅವರು, ‘9 ವರ್ಷ ಗುಜರಾತ್ನಲ್ಲಿ ಮಾಡಬಾರದ್ದನ್ನು ಮಾಡಿದ ಅವರು ಈಗ ನಮಗೆ ಪಾಠ ಹೇಳುತ್ತಿದ್ದಾರೆ. ಮೋದಿ ಮುಖ್ಯಮಂತ್ರಿಯಾಗಿದ್ದಾಗ ಲೋಕಾಯುಕ್ತರನ್ನು ನೇಮಕ ಮಾಡಿರಲಿಲ್ಲ. ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಡುವವರೂ ಅವರೇ’ ಎಂದು ಹೇಳಿಕೆಯಲ್ಲಿ ಹರಿಹಾಯ್ದಿದ್ದಾರೆ.