ಮೈಸೂರು: ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಾರದರ್ಶಕವಾಗಿ ನಡೆದುಕೊಂಡಿಲ್ಲ; ಅಪರಾಧ ಪ್ರಕರಣ ಎದುರಿಸುತ್ತಿರುವವರಿಗೆ ಮಣೆ ಹಾಕಿವೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಟ್ರಸ್ಟ್ನ ಟ್ರಸ್ಟಿ ಡಾ. ಆರ್.ಬಾಲಸುಬ್ರಮಣಿಯಂ ಆರೋಪಿಸಿದರು.