ರಾಜ್ಯದಲ್ಲಿ ಮಳೆ ಚೆನ್ನಾಗಿ ಆಗಿದೆ. ಬಹುತೇಕ ಜಲಾಶಯಗಳು ತುಂಬಿವೆ. ಮುಂಜಾಗ್ರತಾ ಕ್ರಮವಾಗಿ ಕಬಿನಿಯಿಂದ ಆರು ಟಿ.ಎಂ.ಸಿ ಅಡಿ ನೀರನ್ನು ಹೊರಬಿಡಲಾಗಿದೆ. ಈ ರೀತಿ ನೀರು ಬಿಟ್ಟಾಗ ಬೆಳೆದು ನಿಂತ ಬೆಳೆಗಳಿಗೆ ಹಾನಿ ಆಗಿದ್ದರೆ, ಅಂತಹ ರೈತರಿಗೆ ಪರಿಹಾರ ನೀಡಲು ಚಿಂತನೆ ನಡೆಸಲಾಗುವುದು ಎಂದೂ ಅವರು ಭರವಸೆ ನೀಡಿದರು.