‘ಹಿಂದುಳಿದ ವರ್ಗಕ್ಕೆ ಸೇರಿದ ಎಲ್ಲ ಸಮುದಾಯವರನ್ನು ಪಕ್ಷದ ವೇದಿಕೆಯಡಿ ಒಗ್ಗೂಡಿಸಲು ಎರಡು ಬೃಹತ್ ಸಮಾವೇಶಗಳನ್ನು ನಡೆಸಲಾಗುವುದು. ಉತ್ತರ ಕರ್ನಾಟಕ ಭಾಗದಲ್ಲಿ ಬಸವಣ್ಣನವರ ಐಕ್ಯ ಸ್ಥಳ ಕೂಡಲ ಸಂಗಮದಲ್ಲಿ ಹಾಗೂ ಮಧ್ಯ ಕರ್ನಾಟಕದಲ್ಲಿ ಕನಕದಾಸರ ಕರ್ಮಭೂಮಿ ಕಾಗಿನೆಲೆಯಲ್ಲಿ ಸಮಾವೇಶಗಳನ್ನು ನಡೆಸುವ ಬಗ್ಗೆ ಚರ್ಚೆ ನಡೆದಿದೆ’ ಎಂದು ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ತಿಳಿಸಿದರು.