ನಾನು ಏಳೆ೦ಟು ಚುನಾವಣೆಗಳಲ್ಲಿ ಮತ ಚಲಾಯಿಸಿದ್ದೇನೆ. ರಾಜ್ಯವು ಹಿಂದೆ ಎದುರಿಸಿರುವ, ಪ್ರಸ್ತುತ ಎದುರಿಸುತ್ತಿರುವ ಮತ್ತು ಮುಂದೆಯೂ ಎದುರಿಸಬಹುದಾದ ಜ್ವಲಂತ ಸಮಸ್ಯೆಗಳಾದ ಕುಡಿಯುವ ನೀರು, ಉತ್ತಮ ಗುಣಮಟ್ಟದ ಶಿಕ್ಷಣ, ನೀರಾವರಿ ಯೋಜನೆಗಳು, ರಸ್ತೆ ಅಭಿವೃದ್ಧಿಯಂತಹ ವಿಷಯಗಳ ಬಗ್ಗೆ ಗೆದ್ದ ಅಭ್ಯರ್ಥಿಗಳು ಮಾತನಾಡುವುದೇ ಇಲ್ಲ. ಎಲ್ಲ ವರ್ಗದ ಜನರೂ ಒಂದೇ ಎಂದು ಭಾವಿಸಿ ಅವರ ಅಭಿವೃದ್ಧಿಗಾಗಿ ಶ್ರಮಿಸುವ ಮಾತುಗಳೇ ಅವರಿಂದ ಬರುತ್ತಿಲ್ಲ. ಇಂತಹವರಿಂದ ಏನು ನಿರೀಕ್ಷಿಸಲು ಸಾಧ್ಯ?