ಮೈಸೂರು: ಕೆಎಸ್ಆರ್ಟಿಸಿ ಬಸ್ನಲ್ಲಿ ಯಾವುದೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹ 50 ಲಕ್ಷ ಹಣವನ್ನು ಹುಣಸೂರಿನ ಚುನಾವಣಾಧಿಕಾರಿಗಳು ಶುಕ್ರವಾರ ವಶಕ್ಕೆ ಪಡೆದುಕೊಂಡಿದ್ದಾರೆ.
ಬಿಳಿಕೆರೆ ಸಮೀಪದ ಮನುಗನಹಳ್ಳಿ ಚೆಕ್ಪೋಸ್ಟ್ನಲ್ಲಿ ಎಸ್ಎಸ್ಟಿ ತಂಡದ ತಪಾಸಣೆ ವೇಳೆ ಹಣ ಪತ್ತೆಯಾಗಿದೆ. ಬಸ್ಸು ಮೈಸೂರಿನಿಂದ ಉಡುಪಿಗೆ ತೆರಳುತ್ತಿತ್ತು.
₹2000 ಮತ್ತು ₹ 500 ಮುಖಬೆಲೆಯ ನೋಟುಗಳ ಕಂತೆಗಳನ್ನು ರಟ್ಟಿನ ಪೆಟ್ಟಿಗೆಯಲ್ಲಿ ತುಂಬಿಡಲಾಗಿತ್ತು ಎಂದು ಹುಣಸೂರು ಚುನಾವಣಾಧಿಕಾರಿ ನಿತೀಶ್ ತಿಳಿಸಿದ್ದಾರೆ. ಬಿಳಿಕೆರೆ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ