ಸಂಸದರಾದ ಬಿ.ಎಸ್.ಯಡಿಯೂರಪ್ಪ (ಶಿಕಾರಿಪುರ) ಹಾಗೂ ಬಿ.ಶ್ರೀರಾಮುಲು (ಮೊಳಕಾಲ್ಮುರು) ಅವರನ್ನು ಪಕ್ಷ ಕಣಕ್ಕೆ ಇಳಿಸಿದೆ. ಬಾದಾಮಿಯಿಂದ ಸಂಸದ ಪಿ.ಸಿ. ಗದ್ದಿಗೌಡರ್ ಹಾಗೂ ಯಶವಂತಪುರದಿಂದ ಶೋಭಾ ಅವರಿಗೆ ಟಿಕೆಟ್ ನೀಡಲಿದೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ದಟ್ಟವಾಗಿದೆ. 2008ರ ಚುನಾವಣೆಯಲ್ಲಿ ಯಶವಂತಪುರ ಕ್ಷೇತ್ರದಲ್ಲಿ ಶೋಭಾ ಗೆದ್ದಿದ್ದರು. ಕೆಜೆಪಿಗೆ ವಲಸೆ ಹೋಗಿದ್ದ ಅವರು ಕಳೆದ ಚುನಾವಣೆಯಲ್ಲಿ ರಾಜಾಜಿನಗರ ಕ್ಷೇತ್ರದಲ್ಲಿ ಸ್ಪರ್ಧಿಸಿ ಮೂರನೇ ಸ್ಥಾನ ಪಡೆದಿದ್ದರು.