ಬಿಜೆಪಿ ಟಿಕೆಟ್ಗಾಗಿ ಪೈಪೋಟಿ ಆರಂಭವಾಗಿದ್ದು, ವಿಜಯ ಕುಮಾರ್ ನಿಧನದ ಅನುಕಂಪವನ್ನು ಬಂಡವಾಳ ಮಾಡಿಕೊಳ್ಳುವ ಉದ್ದೇಶದಿಂದ ಅವರ ಅಣ್ಣನ ಮಗ ರಾಮು ಅವರಿಗೆ ಟಿಕೆಟ್ ಕೊಡಲು ಪಕ್ಷ ಚಿಂತಿಸುತ್ತಿದೆ. ಅಲ್ಲದೆ, ಕೇಂದ್ರ ಸಚಿವ ಅನಂತ ಕುಮಾರ್ ಅವರ ಪತ್ನಿ ತೇಜಸ್ವಿನಿ, ವಿಧಾನ ಪರಿಷತ್ ಸದಸ್ಯೆ ತಾರಾ ಅನೂರಾಧ ಅವರ ಹೆಸರುಗಳೂ ಕೇಳಿಬರುತ್ತಿವೆ.