ಮಾಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೇತಗಾನಹಳ್ಳಿಯಲ್ಲಿ ಶನಿವಾರ ಮತದಾನ ಮಾಡಿದ ಸಂದರ್ಭದಲ್ಲಿ ಅವರು ಪತ್ರಕರ್ತರ ಜೊತೆಗೆ ಮಾತನಾಡಿದರು. ಪಕ್ಷದ ಪರ ಎಲ್ಲೆಡೆ ಒಲವು ವ್ಯಕ್ತವಾಗುತ್ತಿದೆ. ಅದರಲ್ಲೂ ಮಹಿಳೆಯರು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲ ನೀಡುತ್ತಿದ್ದಾರೆ ಎಂದರು. ಈ ಬಾರಿ ಯಾವುದೇ ಕಾರಣಕ್ಕೂ ಬಿಜೆಪಿ, ಕಾಂಗ್ರೆಸ್ ಜೊತೆ ಕೈ ಜೋಡಿಸುವುದಿಲ್ಲ. ಯಾರ ಮನೆಯ ಬಾಗಿಲಿಗೂ ಹೋಗುವುದಿಲ್ಲ. ಅವರೂ ನನ್ನ ಮನೆ ಬಾಗಿಲಿಗೆ ಬರುವುದು ಬೇಡ ಎಂದರು.