<p><strong>ಬೆಂಗಳೂರು:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತದ ಅವಧಿಯಲ್ಲಿ ಕರ್ನಾಟಕದ ಜನತೆ ‘ಶ್ರೀಮಂತ’ರಾಗಿದ್ದಾರೆ. ಈ ಬೆಳವಣಿಗೆ ಮುಂದುವರಿಯಲು ಸಿದ್ದರಾಮಯ್ಯ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಕಾಂಗ್ರೆಸ್ನ ಹಿರಿಯ ನಾಯಕ ಪಿ.ಚಿದಂಬರಂ ಪ್ರತಿಪಾದಿಸಿದರು.</p>.<p>ರಾಜ್ಯದ ಜನತೆ ಧನಿಕರಾಗಲು ಮುಖ್ಯಕಾರಣ ಜನರ ತಲಾ ಆದಾಯ ಏರಿಕೆಯ ಬೆಳವಣಿಗೆ ಪ್ರಮಾಣ ಶೇ 125 ರಷ್ಟಾಗಿದೆ. ರಾಷ್ಟ್ರಮಟ್ಟದಲ್ಲಿ ಈ ಬೆಳವಣಿಗೆ ಶೇ 59 ಇದೆ ಎಂದು ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.</p>.<p>ಬಿಜೆಪಿ ಆಡಳಿತದಲ್ಲಿ ಇದ್ದಾಗ ಸರಾಸರಿ ತಲಾ ಆದಾಯ ₹ 77,309 ಇತ್ತು. ಸಿದ್ದರಾಮಯ್ಯ ಅವಧಿಯಲ್ಲಿ ಆ ಪ್ರಮಾಣ ₹ 1,74,551ಕ್ಕೆ ಏರಿದೆ. ಅಲ್ಲದೆ, ರಾಜ್ಯದ ಒಟ್ಟು ದೇಶಿಯ ಉತ್ಪನ್ನ (ಜಿಎಸ್ಡಿಪಿ) 2012–13 ರಲ್ಲಿ ₹ 6,43,292 ಕೋಟಿ ಇದ್ದದ್ದು 2017–18 ರಲ್ಲಿ ₹ 9,49,111 ಕೋಟಿಗೆ ಏರಿಕೆ ಆಗಿದೆ ಎಂದರು.</p>.<p>ಇಡಿ ದೇಶದಲ್ಲಿ ನಿರುದ್ಯೋಗ ಪ್ರಮಾಣ ಕರ್ನಾಟಕದಲ್ಲೇ ಅತಿ ಕಡಿಮೆ. ಏಪ್ರಿಲ್ನಲ್ಲಿ ನಿರುದ್ಯೋಗ ಪ್ರಮಾಣ ಶೇ 2.6 ಇತ್ತು. ದೇಶದಲ್ಲಿ ಆ ಪ್ರಮಾಣ ಶೇ 5.9 ಇದೆ ಎಂದರು.</p>.<p>ಮೋದಿ ಪ್ರಧಾನಿಯಂತೆ ವರ್ತಿಸುತ್ತಿಲ್ಲ, ಆರ್ಎಸ್ಎಸ್ ಪ್ರಚಾರಕನಂತೆ ವರ್ತಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.</p>.<p><strong>ಆದಾಯ ತೆರಿಗೆ ಇಲಾಖೆ ವಿರುದ್ಧ ಕಾಂಗ್ರೆಸ್ ಕಿಡಿ</strong></p>.<p>ಕಾಂಗ್ರೆಸ್ ಅಭ್ಯರ್ಥಿಗಳ ಮನೆ ಮತ್ತು ಕಚೇರಿ ಮೇಲೆ ದಾಳಿಗೆ ಕಾರಣರಾಗಿರುವ ಆದಾಯ ತೆರಿಗೆ ಇಲಾಖೆಯ ಕೆಲವು ಅಧಿಕಾರಿಗಳನ್ನು ತಕ್ಷಣವೇ ವರ್ಗಾವಣೆ ಮಾಡಬೇಕು ಎಂದು ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷ ದಿನೇಶ್ಗುಂಡೂರಾವ್ ಆಗ್ರಹಿಸಿದರು.</p>.<p>‘ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯ ಕೇಂದ್ರ ಸರ್ಕಾರದ ಕೈಗೊಂಬೆಯಾಗಿದೆ. ನಮ್ಮ ಅಭ್ಯರ್ಥಿಗಳನ್ನು ಹೆದರಿಸುವ ಮತ್ತು ಮಾನಸಿಕ ಹಿಂಸೆ ನೀಡುವ ಕೆಲಸ ನಡೆಯುತ್ತಿದೆ. ಆದ್ದರಿಂದ ಚುನಾವಣೆ ಮುಗಿಯುವವರೆಗೆ ಅಧಿಕಾರಿಗಳನ್ನು ಕರ್ನಾಟಕದಿಂದ ಹೊರಗೆ ಹಾಕಬೇಕು’ ಎಂದರು.</p>.<p>ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರೂ, ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಆದರೆ, ರಾಜ್ಯ ಸರ್ಕಾರದ ಅಧಿಕಾರಿಗಳನ್ನು ನಿರಂತರವಾಗಿ ವರ್ಗಾವಣೆ ಮಾಡುತ್ತಿದೆ ಎಂದೂ ಅವರು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತದ ಅವಧಿಯಲ್ಲಿ ಕರ್ನಾಟಕದ ಜನತೆ ‘ಶ್ರೀಮಂತ’ರಾಗಿದ್ದಾರೆ. ಈ ಬೆಳವಣಿಗೆ ಮುಂದುವರಿಯಲು ಸಿದ್ದರಾಮಯ್ಯ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಕಾಂಗ್ರೆಸ್ನ ಹಿರಿಯ ನಾಯಕ ಪಿ.ಚಿದಂಬರಂ ಪ್ರತಿಪಾದಿಸಿದರು.</p>.<p>ರಾಜ್ಯದ ಜನತೆ ಧನಿಕರಾಗಲು ಮುಖ್ಯಕಾರಣ ಜನರ ತಲಾ ಆದಾಯ ಏರಿಕೆಯ ಬೆಳವಣಿಗೆ ಪ್ರಮಾಣ ಶೇ 125 ರಷ್ಟಾಗಿದೆ. ರಾಷ್ಟ್ರಮಟ್ಟದಲ್ಲಿ ಈ ಬೆಳವಣಿಗೆ ಶೇ 59 ಇದೆ ಎಂದು ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.</p>.<p>ಬಿಜೆಪಿ ಆಡಳಿತದಲ್ಲಿ ಇದ್ದಾಗ ಸರಾಸರಿ ತಲಾ ಆದಾಯ ₹ 77,309 ಇತ್ತು. ಸಿದ್ದರಾಮಯ್ಯ ಅವಧಿಯಲ್ಲಿ ಆ ಪ್ರಮಾಣ ₹ 1,74,551ಕ್ಕೆ ಏರಿದೆ. ಅಲ್ಲದೆ, ರಾಜ್ಯದ ಒಟ್ಟು ದೇಶಿಯ ಉತ್ಪನ್ನ (ಜಿಎಸ್ಡಿಪಿ) 2012–13 ರಲ್ಲಿ ₹ 6,43,292 ಕೋಟಿ ಇದ್ದದ್ದು 2017–18 ರಲ್ಲಿ ₹ 9,49,111 ಕೋಟಿಗೆ ಏರಿಕೆ ಆಗಿದೆ ಎಂದರು.</p>.<p>ಇಡಿ ದೇಶದಲ್ಲಿ ನಿರುದ್ಯೋಗ ಪ್ರಮಾಣ ಕರ್ನಾಟಕದಲ್ಲೇ ಅತಿ ಕಡಿಮೆ. ಏಪ್ರಿಲ್ನಲ್ಲಿ ನಿರುದ್ಯೋಗ ಪ್ರಮಾಣ ಶೇ 2.6 ಇತ್ತು. ದೇಶದಲ್ಲಿ ಆ ಪ್ರಮಾಣ ಶೇ 5.9 ಇದೆ ಎಂದರು.</p>.<p>ಮೋದಿ ಪ್ರಧಾನಿಯಂತೆ ವರ್ತಿಸುತ್ತಿಲ್ಲ, ಆರ್ಎಸ್ಎಸ್ ಪ್ರಚಾರಕನಂತೆ ವರ್ತಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.</p>.<p><strong>ಆದಾಯ ತೆರಿಗೆ ಇಲಾಖೆ ವಿರುದ್ಧ ಕಾಂಗ್ರೆಸ್ ಕಿಡಿ</strong></p>.<p>ಕಾಂಗ್ರೆಸ್ ಅಭ್ಯರ್ಥಿಗಳ ಮನೆ ಮತ್ತು ಕಚೇರಿ ಮೇಲೆ ದಾಳಿಗೆ ಕಾರಣರಾಗಿರುವ ಆದಾಯ ತೆರಿಗೆ ಇಲಾಖೆಯ ಕೆಲವು ಅಧಿಕಾರಿಗಳನ್ನು ತಕ್ಷಣವೇ ವರ್ಗಾವಣೆ ಮಾಡಬೇಕು ಎಂದು ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷ ದಿನೇಶ್ಗುಂಡೂರಾವ್ ಆಗ್ರಹಿಸಿದರು.</p>.<p>‘ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯ ಕೇಂದ್ರ ಸರ್ಕಾರದ ಕೈಗೊಂಬೆಯಾಗಿದೆ. ನಮ್ಮ ಅಭ್ಯರ್ಥಿಗಳನ್ನು ಹೆದರಿಸುವ ಮತ್ತು ಮಾನಸಿಕ ಹಿಂಸೆ ನೀಡುವ ಕೆಲಸ ನಡೆಯುತ್ತಿದೆ. ಆದ್ದರಿಂದ ಚುನಾವಣೆ ಮುಗಿಯುವವರೆಗೆ ಅಧಿಕಾರಿಗಳನ್ನು ಕರ್ನಾಟಕದಿಂದ ಹೊರಗೆ ಹಾಕಬೇಕು’ ಎಂದರು.</p>.<p>ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರೂ, ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಆದರೆ, ರಾಜ್ಯ ಸರ್ಕಾರದ ಅಧಿಕಾರಿಗಳನ್ನು ನಿರಂತರವಾಗಿ ವರ್ಗಾವಣೆ ಮಾಡುತ್ತಿದೆ ಎಂದೂ ಅವರು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>