<p><strong>ಬೆಂಗಳೂರು: </strong>‘ದಾಸರಹಳ್ಳಿ ಶಾಸಕ ಮುನಿರಾಜು ವಿದ್ಯಾಭ್ಯಾಸಕ್ಕೆಂದು ಹೊರ ರಾಜ್ಯಗಳಿಂದ ಬರುವ ವಿದ್ಯಾರ್ಥಿಗಳಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮತದಾನದ ಪಟ್ಟಿಯಲ್ಲಿ ಹೆಸರು ನೊಂದಾಯಿಸುತ್ತಿದ್ದಾರೆ’ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಹೆಸರುಘಟ್ಟ ಮುಖ್ಯ ರಸ್ತೆಯಲ್ಲಿನ ಬಾಗಲುಗುಂಟೆ ಪಾಲಿಕೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>‘ಬಾಗಲುಗುಂಟೆ, ಚಿಕ್ಕಬಾಣಾವರ, ಬೋನ್ವೀಲ್ ಗ್ರಾಮಗಳ ವ್ಯಾಪ್ತಿಯಲ್ಲಿ ಹತ್ತರಿಂದ ಹನ್ನೆರಡು ಕಾಲೇಜುಗಳಿವೆ. ಅವೆಲ್ಲವು ಅಂತರರಾಷ್ಟ್ರೀಯ ಕಾಲೇಜುಗಳಾಗಿದ್ದು, ಹೊರದೇಶಗಳ ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅವರಿಗೆ ಮತದಾನದ ಗುರುತಿನ ಚೀಟಿಯನ್ನು ಮಾಡಿಸುತ್ತಿದ್ದಾರೆ. ಇದಕ್ಕಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ’ ಎಂದು ಜೆಡಿಎಸ್ ಮುಖಂಡ ಮಂಜುನಾಥ್ ಆರೋಪಿಸಿದರು.</p>.<p>‘ಐದಾರು ವರ್ಷಗಳಿಂದ ಮುನಿರಾಜು ಬೆಂಬಲಿಗರು ನಕಲಿ ದಾಖಲೆಗಳನ್ನು ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ದಾಸರಹಳ್ಳಿ ಕ್ಷೇತ್ರದಲ್ಲಿ ಸುಮಾರು ಹತ್ತು ಸಾವಿರ ಮತದಾರರನ್ನು ಈ ರೀತಿ ಸೇರಿಸಲಾಗಿದೆ. ಈ ಬಾರಿ ಗೆಲ್ಲಲೇ ಬೇಕೆಂದು ಪಣ ತೊಟ್ಟಿರುವ ಅವರು, ಕಂಡ ಕಂಡವರ ಹೆಸರನ್ನು ಮತದಾನದ ಪಟ್ಟಿಗೆ ಸೇರಿಸುತ್ತಿದ್ದಾರೆ. ಪಾಲಿಕೆಯ ಅಧಿಕಾರಿಗಳು ಅವರ ತಾಳಕ್ಕೆ ಕುಣಿಯುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.</p>.<p>ಚಿಕ್ಕಬಾಣಾವರದ ಜೆಡಿಎಸ್ ಸಂಚಾಲಕ ವರದರಾಜು, ‘ಬಿಜೆಪಿ ಶಕ್ತಿ ಕೇಂದ್ರದಲ್ಲಿ ಅಧ್ಯಕ್ಷನಾಗಿ ಕೆಲಸ ಮಾಡಿದ್ದೀನಿ. ಉಸಿರು ಗಟ್ಟುವ ವಾತಾವರಣವಿದ್ದು, ಶಾಸಕರ ಕೈಗೊಂಬೆಗಳಾಗಿ ಕಾರ್ಯಕರ್ತರು ಕೆಲಸನಿರ್ವಹಿಸಬೇಕು. ನಕಲಿ ಮತದಾನದ ಬಗ್ಗೆ ತನಿಖೆಯಾಗಬೇಕು’ ಎಂದು ತಿಳಿಸಿದರು.</p>.<p>‘ಶಾಸಕರಾಗಿ ಅವರು ಚಿಕ್ಕಬಾಣಾವರ ಕೆರೆಯನ್ನು ಅಭಿವೃದ್ದಿ ಮಾಡಲಿಲ್ಲ. ಶೆಟ್ಟಿಹಳ್ಳಿ, ಅಬ್ಬಿಗೆರೆ, ಸೋಮಶೆಟ್ಟಿಹಳ್ಳಿಯ ಅನೇಕ ಗ್ರಾಮಗಳು ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿವೆ’ ಎಂದರು.</p>.<p><strong>ತಿಮ್ಮರಾಜುಗೌಡ ಜೆಡಿಎಸ್ ಪಕ್ಷವಲ್ಲ:</strong></p>.<p>‘ಬಾಡೂಟ ಆಯೋಜಿಸಿ ಬಂಧನಕ್ಕೆ ಒಳಗಾಗಿರುವ ತಿಮ್ಮರಾಜುಗೌಡ ಜೆಡಿಎಸ್ ಪಕ್ಷದವರಲ್ಲ. ಎರಡು ವರ್ಷಗಳ ಹಿಂದೆ ಅವರು ಜೆಡಿಎಸ್ ಪರವಾಗಿ ಬಂಡಾಯ ಎದ್ದಿದ್ದರು. ಅಗ ಅವರನ್ನು ಪಕ್ಷದಿಂದ ಉಚ್ಚಾಟಿಸಾಗಿದೆ’ ಎಂದು ಮಂಜುನಾಥ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ದಾಸರಹಳ್ಳಿ ಶಾಸಕ ಮುನಿರಾಜು ವಿದ್ಯಾಭ್ಯಾಸಕ್ಕೆಂದು ಹೊರ ರಾಜ್ಯಗಳಿಂದ ಬರುವ ವಿದ್ಯಾರ್ಥಿಗಳಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮತದಾನದ ಪಟ್ಟಿಯಲ್ಲಿ ಹೆಸರು ನೊಂದಾಯಿಸುತ್ತಿದ್ದಾರೆ’ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಹೆಸರುಘಟ್ಟ ಮುಖ್ಯ ರಸ್ತೆಯಲ್ಲಿನ ಬಾಗಲುಗುಂಟೆ ಪಾಲಿಕೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>‘ಬಾಗಲುಗುಂಟೆ, ಚಿಕ್ಕಬಾಣಾವರ, ಬೋನ್ವೀಲ್ ಗ್ರಾಮಗಳ ವ್ಯಾಪ್ತಿಯಲ್ಲಿ ಹತ್ತರಿಂದ ಹನ್ನೆರಡು ಕಾಲೇಜುಗಳಿವೆ. ಅವೆಲ್ಲವು ಅಂತರರಾಷ್ಟ್ರೀಯ ಕಾಲೇಜುಗಳಾಗಿದ್ದು, ಹೊರದೇಶಗಳ ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅವರಿಗೆ ಮತದಾನದ ಗುರುತಿನ ಚೀಟಿಯನ್ನು ಮಾಡಿಸುತ್ತಿದ್ದಾರೆ. ಇದಕ್ಕಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ’ ಎಂದು ಜೆಡಿಎಸ್ ಮುಖಂಡ ಮಂಜುನಾಥ್ ಆರೋಪಿಸಿದರು.</p>.<p>‘ಐದಾರು ವರ್ಷಗಳಿಂದ ಮುನಿರಾಜು ಬೆಂಬಲಿಗರು ನಕಲಿ ದಾಖಲೆಗಳನ್ನು ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ದಾಸರಹಳ್ಳಿ ಕ್ಷೇತ್ರದಲ್ಲಿ ಸುಮಾರು ಹತ್ತು ಸಾವಿರ ಮತದಾರರನ್ನು ಈ ರೀತಿ ಸೇರಿಸಲಾಗಿದೆ. ಈ ಬಾರಿ ಗೆಲ್ಲಲೇ ಬೇಕೆಂದು ಪಣ ತೊಟ್ಟಿರುವ ಅವರು, ಕಂಡ ಕಂಡವರ ಹೆಸರನ್ನು ಮತದಾನದ ಪಟ್ಟಿಗೆ ಸೇರಿಸುತ್ತಿದ್ದಾರೆ. ಪಾಲಿಕೆಯ ಅಧಿಕಾರಿಗಳು ಅವರ ತಾಳಕ್ಕೆ ಕುಣಿಯುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.</p>.<p>ಚಿಕ್ಕಬಾಣಾವರದ ಜೆಡಿಎಸ್ ಸಂಚಾಲಕ ವರದರಾಜು, ‘ಬಿಜೆಪಿ ಶಕ್ತಿ ಕೇಂದ್ರದಲ್ಲಿ ಅಧ್ಯಕ್ಷನಾಗಿ ಕೆಲಸ ಮಾಡಿದ್ದೀನಿ. ಉಸಿರು ಗಟ್ಟುವ ವಾತಾವರಣವಿದ್ದು, ಶಾಸಕರ ಕೈಗೊಂಬೆಗಳಾಗಿ ಕಾರ್ಯಕರ್ತರು ಕೆಲಸನಿರ್ವಹಿಸಬೇಕು. ನಕಲಿ ಮತದಾನದ ಬಗ್ಗೆ ತನಿಖೆಯಾಗಬೇಕು’ ಎಂದು ತಿಳಿಸಿದರು.</p>.<p>‘ಶಾಸಕರಾಗಿ ಅವರು ಚಿಕ್ಕಬಾಣಾವರ ಕೆರೆಯನ್ನು ಅಭಿವೃದ್ದಿ ಮಾಡಲಿಲ್ಲ. ಶೆಟ್ಟಿಹಳ್ಳಿ, ಅಬ್ಬಿಗೆರೆ, ಸೋಮಶೆಟ್ಟಿಹಳ್ಳಿಯ ಅನೇಕ ಗ್ರಾಮಗಳು ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿವೆ’ ಎಂದರು.</p>.<p><strong>ತಿಮ್ಮರಾಜುಗೌಡ ಜೆಡಿಎಸ್ ಪಕ್ಷವಲ್ಲ:</strong></p>.<p>‘ಬಾಡೂಟ ಆಯೋಜಿಸಿ ಬಂಧನಕ್ಕೆ ಒಳಗಾಗಿರುವ ತಿಮ್ಮರಾಜುಗೌಡ ಜೆಡಿಎಸ್ ಪಕ್ಷದವರಲ್ಲ. ಎರಡು ವರ್ಷಗಳ ಹಿಂದೆ ಅವರು ಜೆಡಿಎಸ್ ಪರವಾಗಿ ಬಂಡಾಯ ಎದ್ದಿದ್ದರು. ಅಗ ಅವರನ್ನು ಪಕ್ಷದಿಂದ ಉಚ್ಚಾಟಿಸಾಗಿದೆ’ ಎಂದು ಮಂಜುನಾಥ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>