ಸಾಗರ: ‘ಸಾಗರದಂತಹ ಕ್ಷೇತ್ರದಲ್ಲಿ ನನ್ನ ಸೋಲು ತಲೆ ತಗ್ಗಿಸುವಂಥದ್ದು. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಮತದಾರನೇ ದೇವರು. ಆತ ಕೊಟ್ಟ ತೀರ್ಮಾನವನ್ನು ಸ್ವೀಕರಿಸಲೇಬೇಕು. ಚುನಾವಣೆಯಲ್ಲಿ ಗೆಲುವು, ಸೋಲು ಎರಡನ್ನೂ ನಾನು ಕಂಡಿದ್ದು, ಅದನ್ನು ಜೀರ್ಣಿಸಿಕೊಳ್ಳುವ ಶಕ್ತಿ ಇದೆ’ ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ತಿಳಿಸಿದರು.