ಸಿದ್ದರಾಮಯ್ಯ ಅವರನ್ನು ಸೋಲಿಸಲು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ. ಅಲ್ಲಿ ಜೆಡಿಎಸ್ ಪ್ರಬಲ ಅಭ್ಯರ್ಥಿ ಜಿ.ಟಿ. ದೇವೇಗೌಡ ಅವರನ್ನು ಕಣಕ್ಕೆ ಇಳಿಸಿದೆ. ಆದರೆ, ಯಡಿಯೂರಪ್ಪ ವಿರುದ್ಧ ಗುಡುಗುತ್ತಿದ್ದ ಸಿದ್ದರಾಮಯ್ಯ ಇಲ್ಲಿ ಏಕೆ ಪ್ರಬಲ ಅಭ್ಯರ್ಥಿಯನ್ನು ಘೋಷಿಸಲಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ.