‘ದೇವರ ಅನುಗ್ರಹ, ಜನರ ಅಭಿಮಾನದಿಂದ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ. 38 ಸ್ಥಾನ ಗೆದ್ದ ಪಕ್ಷಕ್ಕೆ, 78 ಸ್ಥಾನಗಳಲ್ಲಿ ಗೆಲುವು ಸಾಧಿಸಿದ ರಾಷ್ಟ್ರೀಯ ಪಕ್ಷ ಬೆಂಬಲ ನೀಡುವುದರ ಹಿಂದೆ ದೇವರ ಅನುಗ್ರಹವಿದೆ. ಕುಮಾರಸ್ವಾಮಿ ಅವರಿಗೆ ಬಹುಮತ ಸಿಕ್ಕಿಲ್ಲ ಎಂಬ ನೋವಿದೆ. ಸಾಕಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆ. ಅಧಿಕಾರ ಕೊಟ್ಟರೂ ದೇವರು ಪರೀಕ್ಷಿಸುತ್ತಿದ್ದಾನೆ. ಪರೀಕ್ಷೆಯಲ್ಲಿ ತೇರ್ಗಡೆ ಆಗಲು ಹೋರಾಟ ಮಾಡಬೇಕಿದೆ’ ಎಂದರು.