<p><strong>ಬೆಂಗಳೂರು</strong>: ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ನಡೆದ ಮರುದಿನವೇ ಜೆಡಿಎಸ್ ರಾಜ್ಯ ಘಟಕ ಅಧ್ಯಕ್ಷ ಕುಮಾರಸ್ವಾಮಿ ಅವರು ಸಿಂಗಾಪುರ್ಗೆ ಪ್ರಯಾಣಿಸಿದ್ದಾರೆ.</p>.<p>ಮತಗಟ್ಟೆ ಸಮೀಕ್ಷೆಗಳಲ್ಲಿ ಹೆಚ್ಚಿನ ಸಮೀಕ್ಷೆಗಳು ಯಾವೊಂದು ಪಕ್ಷಕ್ಕೂ ಸ್ಪಷ್ಟ ಬಹುಮತ ನೀಡಿಲ್ಲವಾದರೂ, 26–38 ಕ್ಷೇತ್ರಗಳಲ್ಲಿ ಜಯ ಸಾಧಿಸಲಿರುವ ಜೆಡಿಎಸ್ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಹೇಳಿವೆ. ಇದರ ಬೆನ್ನಲ್ಲೇ ಕುಮಾರಸ್ವಾಮಿ ಸಿಂಗಾಪುರ್ಗೆ ಪ್ರಯಾಣಿಸಿದ್ದು, ಮತ ಎಣಿಕೆ ದಿನವಾದ ಮಂಗಳವಾರ ವಾಪಸ್ ಬರಲಿದ್ದಾರೆ.</p>.<p>ಕಾಂಗ್ರೆಸ್, ಬಿಜೆಪಿ ನೇತಾರರು ಕುಮಾರಸ್ವಾಮಿ ಮತ್ತು ದೇವೇಗೌಡರನ್ನು ಭೇಟಿಯಾಗಿದ್ದಾರೆ. ರಾಜಕೀಯ ಚರ್ಚೆಗಳಿಗಾಗಿ ಕುಮಾರಸ್ವಾಮಿ ಸಿಂಗಾಪುರ್ಗೆ ಹೋಗಿರಬಹುದು. ರಾಜಕೀಯ ಚರ್ಚೆಗಳು ಇಲ್ಲಿ ನಡೆದರೆ ಅದು ಮಾಧ್ಯಮಗಳಿಗೆ ಸೋರಿಕೆಯಾಗುವ ಸಾಧ್ಯತೆ ಇದೆ ಎಂದು ಕುಮಾರಸ್ವಾಮಿಯವರ ಆಪ್ತರೊಬ್ಬರು ಹೇಳಿರುವುದಾಗಿ ನ್ಯೂಸ್ 18 <a href="https://www.news18.com/news/politics/karnataka-election-kingmaker-kumaraswamy-takes-off-to-singapore-triggers-buzz-of-post-poll-negotiations-1746597.html" target="_blank">ವರದಿ</a> ಮಾಡಿದೆ.</p>.<p>ಅದೇ ವೇಳೆ ಈ ಬಗ್ಗೆ ಕೇಳಲು ಕುಮಾರಸ್ವಾಮಿ ಅವರಿಗೆ ಫೋನ್ ಮಾಡಿದರೆ, ನಾನು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ನಡೆದ ಮರುದಿನವೇ ಜೆಡಿಎಸ್ ರಾಜ್ಯ ಘಟಕ ಅಧ್ಯಕ್ಷ ಕುಮಾರಸ್ವಾಮಿ ಅವರು ಸಿಂಗಾಪುರ್ಗೆ ಪ್ರಯಾಣಿಸಿದ್ದಾರೆ.</p>.<p>ಮತಗಟ್ಟೆ ಸಮೀಕ್ಷೆಗಳಲ್ಲಿ ಹೆಚ್ಚಿನ ಸಮೀಕ್ಷೆಗಳು ಯಾವೊಂದು ಪಕ್ಷಕ್ಕೂ ಸ್ಪಷ್ಟ ಬಹುಮತ ನೀಡಿಲ್ಲವಾದರೂ, 26–38 ಕ್ಷೇತ್ರಗಳಲ್ಲಿ ಜಯ ಸಾಧಿಸಲಿರುವ ಜೆಡಿಎಸ್ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಹೇಳಿವೆ. ಇದರ ಬೆನ್ನಲ್ಲೇ ಕುಮಾರಸ್ವಾಮಿ ಸಿಂಗಾಪುರ್ಗೆ ಪ್ರಯಾಣಿಸಿದ್ದು, ಮತ ಎಣಿಕೆ ದಿನವಾದ ಮಂಗಳವಾರ ವಾಪಸ್ ಬರಲಿದ್ದಾರೆ.</p>.<p>ಕಾಂಗ್ರೆಸ್, ಬಿಜೆಪಿ ನೇತಾರರು ಕುಮಾರಸ್ವಾಮಿ ಮತ್ತು ದೇವೇಗೌಡರನ್ನು ಭೇಟಿಯಾಗಿದ್ದಾರೆ. ರಾಜಕೀಯ ಚರ್ಚೆಗಳಿಗಾಗಿ ಕುಮಾರಸ್ವಾಮಿ ಸಿಂಗಾಪುರ್ಗೆ ಹೋಗಿರಬಹುದು. ರಾಜಕೀಯ ಚರ್ಚೆಗಳು ಇಲ್ಲಿ ನಡೆದರೆ ಅದು ಮಾಧ್ಯಮಗಳಿಗೆ ಸೋರಿಕೆಯಾಗುವ ಸಾಧ್ಯತೆ ಇದೆ ಎಂದು ಕುಮಾರಸ್ವಾಮಿಯವರ ಆಪ್ತರೊಬ್ಬರು ಹೇಳಿರುವುದಾಗಿ ನ್ಯೂಸ್ 18 <a href="https://www.news18.com/news/politics/karnataka-election-kingmaker-kumaraswamy-takes-off-to-singapore-triggers-buzz-of-post-poll-negotiations-1746597.html" target="_blank">ವರದಿ</a> ಮಾಡಿದೆ.</p>.<p>ಅದೇ ವೇಳೆ ಈ ಬಗ್ಗೆ ಕೇಳಲು ಕುಮಾರಸ್ವಾಮಿ ಅವರಿಗೆ ಫೋನ್ ಮಾಡಿದರೆ, ನಾನು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>