<p><strong>ಮೈಸೂರು: </strong>ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಿದರು.</p>.<p>ಮಧ್ಯಾಹ್ನ 2.15ಕ್ಕೆ ನಜರಾಬಾದ್ನ ಮಿನಿ ವಿಧಾನಸೌಧದಲ್ಲಿರುವ ಕ್ಷೇತ್ರ ಚುನಾವಣಾಧಿಕಾರಿ ಕಚೇರಿಗೆ ಬಂದು ಉಮೇದುವಾರಿಕೆಸಲ್ಲಿಸಿದರು.</p>.<p>‘1983ರಲ್ಲಿ ನನ್ನ ಮೊದಲ ಚುನಾವಣೆಗೆ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿದ್ದೆ. ಕೊನೆಯ ಚುನಾವಣೆಯನ್ನೂ ಇದೇ ಕ್ಷೇತ್ರದಿಂದ ಎದುರಿಸುತ್ತೇನೆ’ ಎಂದು ನಾಮಪತ್ರ ಸಲ್ಲಿಸಿದ ಬಳಿಕ ಸಿದ್ದರಾಮಯ್ಯ ತಿಳಿಸಿದರು.</p>.<p>ಇದಕ್ಕೂ ಮುನ್ನ ಹಲವು ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ಬೆಳಿಗ್ಗೆ ಹುಟ್ಟೂರು ಸಿದ್ಧರಾಮನಹುಂಡಿಗೆ ತೆರಳಿ ಸಿದ್ಧರಾಮೇಶ್ವರ ಸ್ವಾಮಿ ಮತ್ತು ಆದಿಶಕ್ತಿ ಚಾಮುಂಡಮ್ಮ ದೇವಿಗೆ ಪೂಜೆ ಸಲ್ಲಿಸಿದರು.</p>.<p>ಬಳಿಕ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದರು. ಅಲ್ಲಿಂದ ಅರಮನೆ ಬಳಿಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನೇರವಾಗಿ ನಾಮಪತ್ರ ಸಲ್ಲಿಸಲು ತೆರಳಿದರು.</p>.<p><strong>ಜಿ.ಟಿ.ಡಿ ನಾಮಪತ್ರ ಸಲ್ಲಿಕೆ:</strong> ಸಿದ್ದರಾಮಯ್ಯ ಅವರ ಪ್ರತಿಸ್ಪರ್ಧಿ ಜೆಡಿಎಸ್ನ ಜಿ.ಟಿ.ದೇವೇಗೌಡ ಅವರೂ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅವರು ಚುನಾವಣಾಧಿಕಾರಿ ಕಚೇರಿಗೆ ಬೆಂಬಲಿಗರ ಜತೆ ಮೆರವಣಿಗೆಯಲ್ಲಿ ಬಂದರು.</p>.<p><strong>20 ನಿಮಿಷ ಕಾದು ಕುಳಿತ ಸಿ.ಎಂ</strong><br /> ಜಿ.ಟಿ.ದೇವೇಗೌಡ ಅವರು ಮಧ್ಯಾಹ್ನ 2.05ಕ್ಕೆ ಚುನಾವಣಾಧಿಕಾರಿ ಕಚೇರಿಗೆ ಬಂದರು. 10 ನಿಮಿಷ ಕಳೆದು ಅಲ್ಲಿಗೆ ಬಂದ ಸಿದ್ದರಾಮಯ್ಯ ನೇರವಾಗಿ ವಿಶ್ರಾಂತಿ ಕೊಠಡಿಗೆ ತೆರಳಿದರು. ಜಿ.ಟಿ.ದೇವೇಗೌಡ ಅವರು ನಾಮಪತ್ರ ಸಲ್ಲಿಸಿ ಹೊರಬರುವವರೆಗೆ ಸುಮಾರು 20 ನಿಮಿಷ ಅಲ್ಲೇ ಇದ್ದರು. ಆ ಬಳಿಕ ಚುನಾವಣಾಧಿಕಾರಿ ಬಿ.ವೆಂಕಟೇಶ್ ಅವರಿಗೆ ನಾಮಪತ್ರ ಸಲ್ಲಿಸಿದರು.</p>.<p>*<br /> ನನಗೆ ಯಾವುದೇ ಒತ್ತಡ ಇಲ್ಲ. ಚಾಮುಂಡೇಶ್ವರಿ ಕ್ಷೇತ್ರದ ಜನ ಆಶೀರ್ವಾದ ಮಾಡುವರು ಎಂಬ ವಿಶ್ವಾಸವಿದೆ.<br /> <em><strong>–ಸಿದ್ದರಾಮಯ್ಯ, ಮುಖ್ಯಮಂತ್ರಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಿದರು.</p>.<p>ಮಧ್ಯಾಹ್ನ 2.15ಕ್ಕೆ ನಜರಾಬಾದ್ನ ಮಿನಿ ವಿಧಾನಸೌಧದಲ್ಲಿರುವ ಕ್ಷೇತ್ರ ಚುನಾವಣಾಧಿಕಾರಿ ಕಚೇರಿಗೆ ಬಂದು ಉಮೇದುವಾರಿಕೆಸಲ್ಲಿಸಿದರು.</p>.<p>‘1983ರಲ್ಲಿ ನನ್ನ ಮೊದಲ ಚುನಾವಣೆಗೆ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿದ್ದೆ. ಕೊನೆಯ ಚುನಾವಣೆಯನ್ನೂ ಇದೇ ಕ್ಷೇತ್ರದಿಂದ ಎದುರಿಸುತ್ತೇನೆ’ ಎಂದು ನಾಮಪತ್ರ ಸಲ್ಲಿಸಿದ ಬಳಿಕ ಸಿದ್ದರಾಮಯ್ಯ ತಿಳಿಸಿದರು.</p>.<p>ಇದಕ್ಕೂ ಮುನ್ನ ಹಲವು ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ಬೆಳಿಗ್ಗೆ ಹುಟ್ಟೂರು ಸಿದ್ಧರಾಮನಹುಂಡಿಗೆ ತೆರಳಿ ಸಿದ್ಧರಾಮೇಶ್ವರ ಸ್ವಾಮಿ ಮತ್ತು ಆದಿಶಕ್ತಿ ಚಾಮುಂಡಮ್ಮ ದೇವಿಗೆ ಪೂಜೆ ಸಲ್ಲಿಸಿದರು.</p>.<p>ಬಳಿಕ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದರು. ಅಲ್ಲಿಂದ ಅರಮನೆ ಬಳಿಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನೇರವಾಗಿ ನಾಮಪತ್ರ ಸಲ್ಲಿಸಲು ತೆರಳಿದರು.</p>.<p><strong>ಜಿ.ಟಿ.ಡಿ ನಾಮಪತ್ರ ಸಲ್ಲಿಕೆ:</strong> ಸಿದ್ದರಾಮಯ್ಯ ಅವರ ಪ್ರತಿಸ್ಪರ್ಧಿ ಜೆಡಿಎಸ್ನ ಜಿ.ಟಿ.ದೇವೇಗೌಡ ಅವರೂ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅವರು ಚುನಾವಣಾಧಿಕಾರಿ ಕಚೇರಿಗೆ ಬೆಂಬಲಿಗರ ಜತೆ ಮೆರವಣಿಗೆಯಲ್ಲಿ ಬಂದರು.</p>.<p><strong>20 ನಿಮಿಷ ಕಾದು ಕುಳಿತ ಸಿ.ಎಂ</strong><br /> ಜಿ.ಟಿ.ದೇವೇಗೌಡ ಅವರು ಮಧ್ಯಾಹ್ನ 2.05ಕ್ಕೆ ಚುನಾವಣಾಧಿಕಾರಿ ಕಚೇರಿಗೆ ಬಂದರು. 10 ನಿಮಿಷ ಕಳೆದು ಅಲ್ಲಿಗೆ ಬಂದ ಸಿದ್ದರಾಮಯ್ಯ ನೇರವಾಗಿ ವಿಶ್ರಾಂತಿ ಕೊಠಡಿಗೆ ತೆರಳಿದರು. ಜಿ.ಟಿ.ದೇವೇಗೌಡ ಅವರು ನಾಮಪತ್ರ ಸಲ್ಲಿಸಿ ಹೊರಬರುವವರೆಗೆ ಸುಮಾರು 20 ನಿಮಿಷ ಅಲ್ಲೇ ಇದ್ದರು. ಆ ಬಳಿಕ ಚುನಾವಣಾಧಿಕಾರಿ ಬಿ.ವೆಂಕಟೇಶ್ ಅವರಿಗೆ ನಾಮಪತ್ರ ಸಲ್ಲಿಸಿದರು.</p>.<p>*<br /> ನನಗೆ ಯಾವುದೇ ಒತ್ತಡ ಇಲ್ಲ. ಚಾಮುಂಡೇಶ್ವರಿ ಕ್ಷೇತ್ರದ ಜನ ಆಶೀರ್ವಾದ ಮಾಡುವರು ಎಂಬ ವಿಶ್ವಾಸವಿದೆ.<br /> <em><strong>–ಸಿದ್ದರಾಮಯ್ಯ, ಮುಖ್ಯಮಂತ್ರಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>