<p><strong>ಮೈಸೂರು: </strong>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಶನಿವಾರ ಪ್ರಚಾರಕ್ಕೆ ಬಂದ ಚಿತ್ರನಟ ದರ್ಶನ್, ತಾಲ್ಲೂಕಿನ ನಾಗನಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ ಎದುರಿಸಬೇಕಾಯಿತು.</p>.<p>ರೋಡ್ ಷೋ ನಡೆಸಿ ವಾಪಸಾಗುವ ವೇಳೆ ಕೆಲವು ಕಾರ್ಯಕರ್ತರು ದರ್ಶನ್ ಅವರಿಗೆ ತಡೆಯೊಡ್ಡಿದರು. ಪಕ್ಷದ ಬಾವುಟ ಬೀಸುತ್ತಾ ಜಿ.ಟಿ.ದೇವೇಗೌಡರ ಪರ ಘೋಷಣೆ ಕೂಗಿದರು. ತಕ್ಷಣ ಎಚ್ಚೆತ್ತ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದರು.</p>.<p>ಇದಕ್ಕೂ ಮುನ್ನ ಜೆಡಿಎಸ್ ಕಾರ್ಯಕರ್ತರು ತಮ್ಮ ಗ್ರಾಮಕ್ಕೆ ದರ್ಶನ್ ಭೇಟಿ ವಿರೋಧಿಸಿ ಘೋಷಣೆ ಕೂಗಿದ್ದರು. ಮತ್ತೊಂದೆಡೆ, ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ನಟನಿಗೆ ಅದ್ಧೂರಿ ಸ್ವಾಗತ ನೀಡಿದರು. ಎರಡೂ ಪಕ್ಷಗಳ ಕಾರ್ಯಕರ್ತರು ವಾಗ್ವಾದ ನಡೆಸಿದ್ದರಿಂದ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.</p>.<p><strong>ಭರ್ಜರಿ ಪ್ರಚಾರ:</strong> ಬೆಳಿಗ್ಗೆಯಿಂದ ಸಂಜೆವರೆಗೆ ಕ್ಷೇತ್ರದ 30ಕ್ಕೂ ಅಧಿಕ ಗ್ರಾಮಗಳಲ್ಲಿ ದರ್ಶನ್ ರೋಡ್ ಷೋ ನಡೆಸಿದರು. ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಯತೀಂದ್ರ ಸಿದ್ದರಾಮಯ್ಯ ಮತ್ತು ಸ್ಥಳೀಯ ಮುಖಂಡರು ಸಾಥ್ ನೀಡಿದರು.</p>.<p><strong>ಮುಖ್ಯಮಂತ್ರಿ ಗೆಲುವಿಗೆ ಮುಡಿ ಹರಕೆ: </strong>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೆಲುವಿಗಾಗಿ ಚಾಮುಂಡೇಶ್ವರಿ ಕ್ಷೇತ್ರದ ಕಾರ್ಯಕರ್ತರು ವಿಶೇಷ ಪೂಜೆ ಮಾಡಿ, ಹರಕೆ ಸಲ್ಲಿಸಿದ್ದಾರೆ.</p>.<p>ರಮಾಬಾಯಿ ನಗರದ ಐವರು ಕಾರ್ಯಕರ್ತರು ಶನಿವಾರ ಮುಡಿ ಕೊಟ್ಟರೆ, ಗೊರೂರಿನ ನಿವಾಸಿಗಳು ಕಳಶ ಹೊತ್ತು ಮೆರವಣಿಗೆ ನಡೆಸಿದರು. ಮಹಿಳೆಯರು ಚಾಮುಂಡಿದೇವಿಗೆ ಪೂಜೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಶನಿವಾರ ಪ್ರಚಾರಕ್ಕೆ ಬಂದ ಚಿತ್ರನಟ ದರ್ಶನ್, ತಾಲ್ಲೂಕಿನ ನಾಗನಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ ಎದುರಿಸಬೇಕಾಯಿತು.</p>.<p>ರೋಡ್ ಷೋ ನಡೆಸಿ ವಾಪಸಾಗುವ ವೇಳೆ ಕೆಲವು ಕಾರ್ಯಕರ್ತರು ದರ್ಶನ್ ಅವರಿಗೆ ತಡೆಯೊಡ್ಡಿದರು. ಪಕ್ಷದ ಬಾವುಟ ಬೀಸುತ್ತಾ ಜಿ.ಟಿ.ದೇವೇಗೌಡರ ಪರ ಘೋಷಣೆ ಕೂಗಿದರು. ತಕ್ಷಣ ಎಚ್ಚೆತ್ತ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದರು.</p>.<p>ಇದಕ್ಕೂ ಮುನ್ನ ಜೆಡಿಎಸ್ ಕಾರ್ಯಕರ್ತರು ತಮ್ಮ ಗ್ರಾಮಕ್ಕೆ ದರ್ಶನ್ ಭೇಟಿ ವಿರೋಧಿಸಿ ಘೋಷಣೆ ಕೂಗಿದ್ದರು. ಮತ್ತೊಂದೆಡೆ, ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ನಟನಿಗೆ ಅದ್ಧೂರಿ ಸ್ವಾಗತ ನೀಡಿದರು. ಎರಡೂ ಪಕ್ಷಗಳ ಕಾರ್ಯಕರ್ತರು ವಾಗ್ವಾದ ನಡೆಸಿದ್ದರಿಂದ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.</p>.<p><strong>ಭರ್ಜರಿ ಪ್ರಚಾರ:</strong> ಬೆಳಿಗ್ಗೆಯಿಂದ ಸಂಜೆವರೆಗೆ ಕ್ಷೇತ್ರದ 30ಕ್ಕೂ ಅಧಿಕ ಗ್ರಾಮಗಳಲ್ಲಿ ದರ್ಶನ್ ರೋಡ್ ಷೋ ನಡೆಸಿದರು. ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಯತೀಂದ್ರ ಸಿದ್ದರಾಮಯ್ಯ ಮತ್ತು ಸ್ಥಳೀಯ ಮುಖಂಡರು ಸಾಥ್ ನೀಡಿದರು.</p>.<p><strong>ಮುಖ್ಯಮಂತ್ರಿ ಗೆಲುವಿಗೆ ಮುಡಿ ಹರಕೆ: </strong>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೆಲುವಿಗಾಗಿ ಚಾಮುಂಡೇಶ್ವರಿ ಕ್ಷೇತ್ರದ ಕಾರ್ಯಕರ್ತರು ವಿಶೇಷ ಪೂಜೆ ಮಾಡಿ, ಹರಕೆ ಸಲ್ಲಿಸಿದ್ದಾರೆ.</p>.<p>ರಮಾಬಾಯಿ ನಗರದ ಐವರು ಕಾರ್ಯಕರ್ತರು ಶನಿವಾರ ಮುಡಿ ಕೊಟ್ಟರೆ, ಗೊರೂರಿನ ನಿವಾಸಿಗಳು ಕಳಶ ಹೊತ್ತು ಮೆರವಣಿಗೆ ನಡೆಸಿದರು. ಮಹಿಳೆಯರು ಚಾಮುಂಡಿದೇವಿಗೆ ಪೂಜೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>