<p><strong>ಕೋಲಾರ: </strong>ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪರ ಗೆಲುವಿಗೆ ಪ್ರಾರ್ಥಿಸಿ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ನಗರದ ಕೋಲಾರಮ್ಮ ದೇವಾಲಯದಲ್ಲಿ 2010 ತೆಂಗಿನ ಕಾಯಿಗಳನ್ನು ಈಡುಗಾಯಿ ಒಡೆದು ಪೂಜೆ ಸಲ್ಲಿಸಿದರು.</p>.<p>ಸ್ವಪಕ್ಷೀಯರ ವಿರೋಧದ ನಡುವೆಯೂ ಮುನಿಯಪ್ಪ ಅವರು ಸುಗಮವಾಗಿ ಕಾಂಗ್ರೆಸ್ ಟಿಕೆಟ್ ಪಡೆದುಕೊಂಡಿದ್ದಕ್ಕೆ ಬೆಂಬಲಿಗರು ಹರ್ಷ ವ್ಯಕ್ತಪಡಿಸಿ, ‘ಮುನಿಯಪ್ಪರು ಈ ಬಾರಿ 2 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿ’ ಎಂದು ಪ್ರಾರ್ಥಿಸಿದರು.</p>.<p>‘ಮುನಿಯಪ್ಪ ಅವರು ಸತತ 7 ಬಾರಿ ಗೆಲುವು ಸಾಧಿಸಿ ಕ್ಷೇತ್ರದಲ್ಲಿ ಜನಾನುರಾಗಿಯಾಗಿದ್ದಾರೆ. ಅವರ 8ನೇ ಬಾರಿ ಅತ್ಯಧಿಕ ಗೆಲುವು ಮತಗಳ ಅಂತರದಿಂದ ಗೆಲುವು ಸಾಧಿಸಬೇಕೆಂದು ಈಡುಗಾಯಿ ಹರಕೆ ತೀರಿಸಲಾಯಿತು’ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಹೇಳಿದರು.</p>.<p>‘ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿ ಅವರು ರೌಡಿ ಪಟ್ಟಿಯಲ್ಲಿದ್ದಾರೆ. ಅವರ ಸ್ಪರ್ಧೆಯಿಂದಾಗಿ ಸಜ್ಜನ ರಾಜಕಾರಣಿ ಮುನಿಯಪ್ಪರ ಗೆಲುವಿನ ಹಾದಿ ಸುಗಮವಾಗಿದೆ. ಈ ಬಾರಿ ಮುನಿಯಪ್ಪ ಅವರು ಹಿಂದಿನ ಚುನಾವಣೆಗಳಿಗಿಂತಲೂ ಹೆಚ್ಚು ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ’ ಎಂದು ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಕೆ.ಜಯದೇವ್ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಈಡುಗಾಯಿ ಒಡೆಯುವುದಕ್ಕೂ ಮುನ್ನ ಕೋಲಾರಮ್ಮ ದೇವಿಗೆ ಪೂಜೆ ಸಲ್ಲಿಸಲಾಯಿತು. ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ಬಾಬು, ಕಾಂಗ್ರೆಸ್ ಮುಖಂಡರಾದ ಕುಮಾರ್, ರಾಮಯ್ಯ, ನಾರಾಯಣಸ್ವಾಮಿ, ರವಿಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪರ ಗೆಲುವಿಗೆ ಪ್ರಾರ್ಥಿಸಿ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ನಗರದ ಕೋಲಾರಮ್ಮ ದೇವಾಲಯದಲ್ಲಿ 2010 ತೆಂಗಿನ ಕಾಯಿಗಳನ್ನು ಈಡುಗಾಯಿ ಒಡೆದು ಪೂಜೆ ಸಲ್ಲಿಸಿದರು.</p>.<p>ಸ್ವಪಕ್ಷೀಯರ ವಿರೋಧದ ನಡುವೆಯೂ ಮುನಿಯಪ್ಪ ಅವರು ಸುಗಮವಾಗಿ ಕಾಂಗ್ರೆಸ್ ಟಿಕೆಟ್ ಪಡೆದುಕೊಂಡಿದ್ದಕ್ಕೆ ಬೆಂಬಲಿಗರು ಹರ್ಷ ವ್ಯಕ್ತಪಡಿಸಿ, ‘ಮುನಿಯಪ್ಪರು ಈ ಬಾರಿ 2 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿ’ ಎಂದು ಪ್ರಾರ್ಥಿಸಿದರು.</p>.<p>‘ಮುನಿಯಪ್ಪ ಅವರು ಸತತ 7 ಬಾರಿ ಗೆಲುವು ಸಾಧಿಸಿ ಕ್ಷೇತ್ರದಲ್ಲಿ ಜನಾನುರಾಗಿಯಾಗಿದ್ದಾರೆ. ಅವರ 8ನೇ ಬಾರಿ ಅತ್ಯಧಿಕ ಗೆಲುವು ಮತಗಳ ಅಂತರದಿಂದ ಗೆಲುವು ಸಾಧಿಸಬೇಕೆಂದು ಈಡುಗಾಯಿ ಹರಕೆ ತೀರಿಸಲಾಯಿತು’ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಹೇಳಿದರು.</p>.<p>‘ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿ ಅವರು ರೌಡಿ ಪಟ್ಟಿಯಲ್ಲಿದ್ದಾರೆ. ಅವರ ಸ್ಪರ್ಧೆಯಿಂದಾಗಿ ಸಜ್ಜನ ರಾಜಕಾರಣಿ ಮುನಿಯಪ್ಪರ ಗೆಲುವಿನ ಹಾದಿ ಸುಗಮವಾಗಿದೆ. ಈ ಬಾರಿ ಮುನಿಯಪ್ಪ ಅವರು ಹಿಂದಿನ ಚುನಾವಣೆಗಳಿಗಿಂತಲೂ ಹೆಚ್ಚು ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ’ ಎಂದು ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಕೆ.ಜಯದೇವ್ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಈಡುಗಾಯಿ ಒಡೆಯುವುದಕ್ಕೂ ಮುನ್ನ ಕೋಲಾರಮ್ಮ ದೇವಿಗೆ ಪೂಜೆ ಸಲ್ಲಿಸಲಾಯಿತು. ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ಬಾಬು, ಕಾಂಗ್ರೆಸ್ ಮುಖಂಡರಾದ ಕುಮಾರ್, ರಾಮಯ್ಯ, ನಾರಾಯಣಸ್ವಾಮಿ, ರವಿಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>