ಮಧು ಬಂಗಾರಪ್ಪ ಶಾಸಕನಾಗಿದ್ದಾಗ ಸೊರಬ ಕ್ಷೇತ್ರಕ್ಕೆ ಏನೂ ಮಾಡಲಿಲ್ಲ. ನಂತರ ಸೋತಾಗಲೂ ಯಾವುದೇ ಯೋಜನೆ ಅನುಷ್ಠಾನಕ್ಕೆ ಶ್ರಮಿಸಲಿಲ್ಲ. ರೈತರಿಗೆ ಸಾಗುವಳಿ ಚೀಟಿ ಕೊಡಿಸಲೂ ಆಗಲಿಲ್ಲ. 3 ಸಾವಿರ ಸಾಗುವಳಿ ಚೀಟಿ ನೀಡಿ, 7 ಸಾವಿರ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಟೀಕಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಡಿ.ಎಸ್. ಅರುಣ್, ಎಸ್.ಎನ್. ಚನ್ನಬಸಪ್ಪ, ಮಧುಸೂದನ್, ಕೆ.ವಿ.ಅಣ್ಣಪ್ಪ, ವಿ.ರಾಜು, ಹಿರಣಯ್ಯ, ರತ್ನಾಕರ ಶೆಣೈ ಉಪಸ್ಥಿತರಿದ್ದರು.