ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಕನ್ನಡ: ಆನಂದ ಅಸ್ನೋಟಿಕರ್ ಆಪ್ತನ ಮನೆ ಮೇಲೆ ಐಟಿ ದಾಳಿ

Last Updated 30 ಏಪ್ರಿಲ್ 2019, 16:47 IST
ಅಕ್ಷರ ಗಾತ್ರ

ಶಿರಸಿ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆನಂದ ಅಸ್ನೋಟಿಕರ್ ಅವರ ಆಪ್ತರಾಗಿರುವ ಉದ್ಯಮಿ ಶಕೀಲ್ ಶೇಖ್ ಮನೆಯ ಮೇಲೆ ಶುಕ್ರವಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇಲ್ಲಿನ ತೋಟಗಾರಿಕಾ ಇಲಾಖೆ ಸಮೀಪ ಇರುವ ಶಕೀಲ್ ಶೇಖ್ ಹಾಗೂ ತಬ್ರೇಜ್ ಶೇಖ್ ಜಂಟಿ ಮಾಲೀಕತ್ವದ ಆಟೊ ಮಾರ್ಕ್ ಕಚೇರಿ ಹಾಗೂ ಅವರ ಮನೆಯ ಮೇಲೆ ದಾಳಿ ನಡೆಸಿ, ಮಹತ್ವದ ಕಾಗದಪತ್ರಗಳನ್ನು ಸಂಗ್ರಹಿಸಲಾಗಿದೆ. ಹುಬ್ಬಳ್ಳಿಯಿಂದ ಇನ್ನೋವಾ ಕಾರಿನಲ್ಲಿ ಬಂದಿದ್ದ ಐಟಿ ಇಲಾಖೆಯ ಐವರು ಅಧಿಕಾರಿಗಳು, ಸ್ಥಳೀಯ ಚುನಾವಣಾ ಪ್ಲೈಯಿಂಗ್ ಸ್ಕ್ವಾಡ್‌ನ ಅಧಿಕಾರಿ ಬಿ.ವಿ.ನಾಯ್ಕ ಸಹಕಾರದಲ್ಲಿ ದಾಳಿ ನಡೆಸಿದರು. ಹೆಚ್ಚಿನ ವಿಚಾರಣೆಗೆ ಅವರನ್ನು ಹುಬ್ಬಳ್ಳಿಗೆ ಕರೆದೊಯ್ಯಲಾಗಿದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT