‘ಹತ್ತು ದಿನಕ್ಕೊಮ್ಮೆ ನೀರು ಪೂರೈಕೆಯಾಗುತ್ತಿದೆ. ಸಮಸ್ಯೆ ಬಗೆಹರಿಸುವಂತೆ ಕಳೆದ ತಿಂಗಳು ಪ್ರತಿಭಟನೆ ನಡೆಸಿದ್ದೆವು. ಅಧಿಕಾರಿಗಳಾಗಲಿ, ಚುನಾಯಿತ ಪ್ರತಿನಿಧಿಗಳಾಗಲಿ ಸ್ಪಂದಿಸಿಲ್ಲ. ಪರಿಸ್ಥಿತಿ ಹೀಗೆ ಮುಂದುವರಿದರೆ ಇದೇ 18ರಂದು ನಡೆಯುವ ಮತದಾನವನ್ನು ಬಹಿಷ್ಕರಿಸುತ್ತೇವೆ’ ಎಂದು ಸ್ಥಳೀಯರಾದ ವರಲಕ್ಷ್ಮಿ, ಲಕ್ಷ್ಮಿ, ವನಜಾಕ್ಷಿ, ಶಾಂತಮ್ಮ ಎಚ್ಚರಿಸಿದರು.