ಬೆಂಗಳೂರು: ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಎದುರು ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಅವರನ್ನು ಕಣಕ್ಕೆ ಇಳಿಸಲು ಬಿಜೆಪಿ ಚಿಂತನೆ ನಡೆಸಿದೆ.
ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ಉಮೇಶ ಜಾಧವ ನೀಡಿರುವ ರಾಜೀನಾಮೆಯನ್ನು ಸಭಾಧ್ಯಕ್ಷ ಕೆ.ಆರ್. ರಮೇಶ್ ಕುಮಾರ್ ಅವರು ನಾಮಪತ್ರ ಸಲ್ಲಿಕೆ ದಿನದವರೆಗೂ ಅಂಗೀಕರಿಸದೇ ಇದ್ದರೆ ಪರ್ಯಾಯ ಅಭ್ಯರ್ಥಿಯಾಗಿ ರತ್ನಪ್ರಭಾ ಸ್ಪರ್ಧಿಸಲಿದ್ದಾರೆ.
ಪ್ರಮುಖರ ಸಮಿತಿಯ ಸದಸ್ಯರು ರತ್ನಪ್ರಭಾ ಜತೆ ಮಾತುಕತೆಯಾಡಿದ್ದು, ಖರ್ಗೆಯವರ ವಿರುದ್ಧ ಸ್ಪರ್ಧಿಸಲು ತಯಾರಾಗಿರುವಂತೆ ಮನವಿ ಮಾಡಿದ್ದಾರೆ ಎಂದು ಬಿಜೆಪಿ ಮೂಲಗಳು ಖಚಿತ ಪಡಿಸಿವೆ.