‘ಹಾಲಿ ಶಾಸಕರಿಗೆ ಟಿಕೆಟ್ ನೀಡುವುದಿಲ್ಲ ಎಂದಿದ್ದರು. ಆದರೆ, ಮೂವರು ಶಾಸಕರ ಹೆಸರು ಪ್ರಕಟಿಸಲಾಯಿತು. ಮುಸ್ಲಿಮರನ್ನು ನಿರ್ಲಕ್ಷ ಮಾಡಲಾಗುತ್ತಿದೆ ಎಂದು ಪ್ರಶ್ನಿಸಿ ರಾಹುಲ್ ಗಾಂಧಿಗೆ ಪತ್ರ ಬರೆಯುತ್ತೇನೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಕಾರ್ಯವೈಖರಿಯ ಬಗ್ಗೆಯೂ ಮಾಹಿತಿ ನೀಡುತ್ತೇನೆ’ ಎಂದರು.