‘ಕಾಂಗ್ರೆಸಿಗರು ಧರ್ಮ ಒಡೆಯುತ್ತಿದ್ದಾರೆ ಎಂದು ನಾನು ಹೇಳಲ್ಲ. ಯಾಕೆಂದರೆ ನಾನೊಬ್ಬ ಕಾಂಗ್ರೆಸಿಗ. ಬಿಜೆಪಿಯೂ ಅದೇ ಕೆಲಸವನ್ನು ಮಾಡುತ್ತಿದೆ. ಎರಡೂ ಪಕ್ಷಗಳಲ್ಲಿ ಅವರಿಗೆ ಬೇಕಾದಂತೆ ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಲಿಂಗಾಯತರು ಎಚ್ಚರಿಕೆಯಿಂದ ಇರಬೇಕು’ ಎಂದು ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಅವರು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು.