ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣವಿಲ್ಲದೆ ಚುನಾವಣೆ ಎದುರಿಸಲು ಸಾಧ್ಯವೇ ಇಲ್ಲ ಎಂಬಂತರ ವಿಷಮ ಸ್ಥಿತಿಯನ್ನು ಭ್ರಷ್ಟ ರಾಜಕಾರಣಿಗಳು ನಿರ್ಮಾಣ ಮಾಡಿದ್ದಾರೆ. ಎಂಎಸ್ಸಿ ಪದವೀಧರನಾಗಿರುವ ಗಂಗಾಧರ ಅವರು ತಮ್ಮ ಬಗ್ಗೆ ಮಾತ್ರ ಚಿಂತೆ ಮಾಡಿದ್ದರೆ ಆರಾಮಾಗಿ ಇರಬಹುದಿತ್ತು. ಆದರೆ, ಜನರ ಪರವಾಗಿ ಕೆಲಸ ಮಾಡಬೇಕು ಎಂಬ ಕಾರಣಕ್ಕೆ ಚುನಾವಣೆಗೆ ನಿಂತಿದ್ದಾರೆ. ಜನರಿಂದಲೂ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ ಎಂದರು.