<p><strong>ಹೊಸಪೇಟೆ:</strong> ‘ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಯೋಧರ ಮೇಲೆ ನಡೆದ ದಾಳಿಯ ಹೊಣೆಯನ್ನು ಕೇಂದ್ರ ಸರ್ಕಾರ ಹೊರಬೇಕು’ ಎಂದು ಸಂಸದ ವಿ.ಎಸ್. ಉಗ್ರಪ್ಪ ಹೇಳಿದರು.</p>.<p>ಇಲ್ಲಿನ ವಕೀಲರ ಸಂಘದ ಕಚೇರಿಯಲ್ಲಿ ಸೋಮವಾರ ಮತಯಾಚಿಸಿದ ಅವರು, ‘ಬೇಹುಗಾರಿಕೆ ಹಾಗೂ ಭದ್ರತಾ ವೈಫಲ್ಯದಿಂದ 40ಕ್ಕೂ ಹೆಚ್ಚು ಯೋಧರು ಪ್ರಾಣ ಕಳೆದುಕೊಳ್ಳಬೇಕಾಯಿತು’ ಎಂದರು.</p>.<p>‘ಯುವಜನಾಂಗ ಸತ್ಯ ಅರಿಯಬೇಕು. ಜತೆಗೆ ಅದನ್ನು ಬೇರೆಯವರಿಗೂ ತಿಳಿಸುವ ಕೆಲಸ ಮಾಡಬೇಕು. ರಾಜಕಾರಣ ಹಣಕ್ಕಾಗಿ, ಶೋಕಿ ಮಾಡುವುದಕ್ಕಲ್ಲ. ಸತ್ಯವನ್ನು ಹೇಳಿ ಜನರನ್ನು ಪ್ರಜ್ಞಾವಂತರಾಗಿ ಮಾಡುವುದು. ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸುವುದು’ ಎಂದು ಹೇಳಿದರು.</p>.<p>‘ಫುಡ್ ಪಾರ್ಕ್ ಸ್ಥಾಪನೆ ಸಂಬಂಧ ಜಿಲ್ಲಾ ಆಡಳಿತದೊಂದಿಗೆ ಚರ್ಚಿಸಿದ್ದೇನೆ. ಬಡತನ, ನಿರುದ್ಯೋಗ, ಕೆರೆಗಳಿಗೆ ನೀರು ತುಂಬಿಸಿ, ಕುಡಿಯುವ ನೀರಿನ ಸಮಸ್ಯೆ ನೀಗಿಸಲಾಗುವುದು. ಉಪಚುನಾವಣೆಯಲ್ಲಿ ಬೆಂಬಲಿಸಿರುವಂತೆ ಸಾರ್ವತ್ರಿಕ ಚುನಾವಣೆಯಲ್ಲಿ ಜಿಲ್ಲೆಯ ಜನರು ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.</p>.<p>ವಕಕೀಲ ಸಂಘದ ಪ್ರಧಾನ ಕಾರ್ಯದರ್ಶಿ ವೀರನಗೌಡ, ವಕೀಲರಾದ ಗುಜ್ಜಲ್ ನಾಗರಾಜ್, ತಾರೀಹಳ್ಳಿ ಹನುಮಂತಪ್ಪ, ಕೆ.ಪ್ರಹ್ಲಾದ, ಬಿ.ವೀರಭದ್ರಪ್ಪ, ಚನ್ನಪ್ಪ, ಮಲ್ಲಿಕಾರ್ಜುನ, ಆನಂದ್, ಸುರೇಶ್ ಪಿ.ವೆಂಕಟೇಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ‘ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಯೋಧರ ಮೇಲೆ ನಡೆದ ದಾಳಿಯ ಹೊಣೆಯನ್ನು ಕೇಂದ್ರ ಸರ್ಕಾರ ಹೊರಬೇಕು’ ಎಂದು ಸಂಸದ ವಿ.ಎಸ್. ಉಗ್ರಪ್ಪ ಹೇಳಿದರು.</p>.<p>ಇಲ್ಲಿನ ವಕೀಲರ ಸಂಘದ ಕಚೇರಿಯಲ್ಲಿ ಸೋಮವಾರ ಮತಯಾಚಿಸಿದ ಅವರು, ‘ಬೇಹುಗಾರಿಕೆ ಹಾಗೂ ಭದ್ರತಾ ವೈಫಲ್ಯದಿಂದ 40ಕ್ಕೂ ಹೆಚ್ಚು ಯೋಧರು ಪ್ರಾಣ ಕಳೆದುಕೊಳ್ಳಬೇಕಾಯಿತು’ ಎಂದರು.</p>.<p>‘ಯುವಜನಾಂಗ ಸತ್ಯ ಅರಿಯಬೇಕು. ಜತೆಗೆ ಅದನ್ನು ಬೇರೆಯವರಿಗೂ ತಿಳಿಸುವ ಕೆಲಸ ಮಾಡಬೇಕು. ರಾಜಕಾರಣ ಹಣಕ್ಕಾಗಿ, ಶೋಕಿ ಮಾಡುವುದಕ್ಕಲ್ಲ. ಸತ್ಯವನ್ನು ಹೇಳಿ ಜನರನ್ನು ಪ್ರಜ್ಞಾವಂತರಾಗಿ ಮಾಡುವುದು. ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸುವುದು’ ಎಂದು ಹೇಳಿದರು.</p>.<p>‘ಫುಡ್ ಪಾರ್ಕ್ ಸ್ಥಾಪನೆ ಸಂಬಂಧ ಜಿಲ್ಲಾ ಆಡಳಿತದೊಂದಿಗೆ ಚರ್ಚಿಸಿದ್ದೇನೆ. ಬಡತನ, ನಿರುದ್ಯೋಗ, ಕೆರೆಗಳಿಗೆ ನೀರು ತುಂಬಿಸಿ, ಕುಡಿಯುವ ನೀರಿನ ಸಮಸ್ಯೆ ನೀಗಿಸಲಾಗುವುದು. ಉಪಚುನಾವಣೆಯಲ್ಲಿ ಬೆಂಬಲಿಸಿರುವಂತೆ ಸಾರ್ವತ್ರಿಕ ಚುನಾವಣೆಯಲ್ಲಿ ಜಿಲ್ಲೆಯ ಜನರು ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.</p>.<p>ವಕಕೀಲ ಸಂಘದ ಪ್ರಧಾನ ಕಾರ್ಯದರ್ಶಿ ವೀರನಗೌಡ, ವಕೀಲರಾದ ಗುಜ್ಜಲ್ ನಾಗರಾಜ್, ತಾರೀಹಳ್ಳಿ ಹನುಮಂತಪ್ಪ, ಕೆ.ಪ್ರಹ್ಲಾದ, ಬಿ.ವೀರಭದ್ರಪ್ಪ, ಚನ್ನಪ್ಪ, ಮಲ್ಲಿಕಾರ್ಜುನ, ಆನಂದ್, ಸುರೇಶ್ ಪಿ.ವೆಂಕಟೇಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>