ನಗರದಲ್ಲಿ ಸೋಮವಾರ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ’ಕೃಷಿ ಹಾಗೂ ನೇಕಾರಿಕೆ ಈ ಜಿಲ್ಲೆಯ ಎರಡು ಕಣ್ಣುಗಳು. ಮಹಾದಾಯಿ, ಕಳಸಾ–ಬಂಡೂರಿ ಯೋಜನೆಗಳ ಜಾರಿಗೆ ಪ್ರಯತ್ನಿಸುವ ಜೊತೆಗೆ ರಬಕವಿ–ಬನಹಟ್ಟಿ, ಇಳಕಲ್, ಗುಳೇದಗುಡ್ಡ, ಕಮತಗಿ, ಕೆರೂರು ಭಾಗದ ಒಂದು ಕಡೆ ಟೆಕ್ಸ್ಟೈಲ್ ಪಾರ್ಕ್, ತಾಲ್ಲೂಕಿಗೊಂದು ಗಾರ್ಮೆಂಟ್ ಫ್ಯಾಕ್ಟರಿ ನಿರ್ಮಾಣಕ್ಕೆ ಆದ್ಯತೆ ನೀಡುವೆ. ರೈತರ ಬೆಳೆಗಳಿಗೆ ಸೂಕ್ತ ಬೆಲೆ ಕೊಡಿಸಲು ಶ್ರಮ ವಹಿಸುವೆ’ ಎಂದು ತಿಳಿಸಿದರು.