ಎಂಬಿಬಿಎಸ್ ಪದವಿ ಪೂರೈಸಿ ಐಆರ್ಎಸ್ ಹುದ್ದೆಗೇರಿದ್ದ ಅವರ ರಾಜೀನಾಮೆ ಕೊಡಿಸಿ, ಚುನಾವಣೆಗೆ ಟಿಕೆಟ್ ಕೊಡುವುದಾಗಿ ನಂಬಿಸಿ ಜೆಡಿಎಸ್ ಮುಖಂಡರು ಕರೆತಂದಿದ್ದರು. ಕಳೆದ ವಿಧಾನಸಭೆ, ಲೋಕಸಭಾ ಉಪಚುನಾವಣೆ ಹಾಗೂ ಈಗಿನ ಲೋಕಸಭಾ ಚುನಾವಣೆಯಲ್ಲೂ ಟಿಕೆಟ್ ಕೊಟ್ಟಿಲ್ಲ. ಕೇವಲ ಒಂದೂವರೆ ವರ್ಷದಲ್ಲಿ ಜಿಲ್ಲೆಯಾದ್ಯಂತ ಅಭಿಮಾನಿ ಬಳಗವನ್ನೇ ಸೃಷ್ಟಿಸಿಕೊಂಡಿದ್ದು, ಜೆಡಿಎಸ್ ಮೋಸ ಮಾಡಿದೆ ಎಂದು ಆರೋಪಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಪ್ರಕಟಿಸಿದ್ದಾರೆ.