<p><strong>ಬೆಂಗಳೂರು</strong>: ಚಿತ್ರರಸಿಕರ ಮನ ಗೆದ್ದಿದ್ದ ಮುಸ್ಸಂಜೆ ಮಾತು ಸಿನಿಮಾ ಬಿಡುಗಡೆಯಾಗಿ ಇಂದಿಗೆ 17 ವರ್ಷ ಗತಿಸಿದೆ. ಈ ಹಿನ್ನೆಲೆಯಲ್ಲಿ ನಟ ಸುದೀಪ್ ಮುಸ್ಸಂಜೆ ಮಾತು ಸಿನಿಮಾ ಬಗ್ಗೆ ವಿಶೇಷ ವಿಡಿಯೊ ಹಂಚಿಕೊಂಡಿದ್ದಾರೆ.</p><p>ಮುಸ್ಸಂಜೆ ಮಾತು ಸಿನಿಮಾ ನನ್ನ ವೃತ್ತಿ ಜೀವನದಲ್ಲಿ ದೊಡ್ಡ ಸ್ಥಾನದಲ್ಲಿ ನಿಲ್ಲುವಂತದ್ದು. ವೃತ್ತಿ ಬದುಕಿಗೆ ಹೊಳಪು ನೀಡಿದೆ. ಅಂತಹ ಅದ್ಭುತ ಸಿನಿಮಾ ಬಿಡುಗಡೆಯಾಗಿ 17 ವರ್ಷ ಗತಿಸಿದರೂ ಇಂದಿಗೂ ಏನಾಗಲಿ ಮುಂದೆ ಸಾಗು ನೀ ಹಾಡು ಎಲ್ಲರ ಎದೆಯಾಳದಲ್ಲಿದೆ ಎಂದಿದ್ದಾರೆ.</p><p>ವಿಶೇಷ ಎಂದರೆ ಏನಾಗಲಿ ಮುಂದೆ ಸಾಗು ನೀ ಹಾಡು ನನ್ನ ಅಮ್ಮ ಸಾಯುವವರೆಗೂ ಅವರ ಕಾಲರ್ ಟ್ಯೂನ್ ಆಗಿತ್ತು. ತಂದೆಯದ್ದೂ ಇಂದಿಗೂ ಅದೇ ಕಾಲರ್ ಟ್ಯೂನ್. ಲಕ್ಷಾಂತರ ಮನಸ್ಸುಗಳಿಗೆ ಸ್ಫೂರ್ತಿ ತುಂಬಿದ ಹಾಡಿನಲ್ಲಿ ನಾನು ಅಭಿನಯಿಸಿರುವುದು ನನಗೆ ಹೆಮ್ಮೆ ಮೂಡಿಸುತ್ತದೆ ಎಂದಿದ್ದಾರೆ.</p><p>ಮುಸ್ಸಂಜೆ ಮಾತು ಸಿನಿಮಾ ಶೂಟಿಂಗ್ ಸಮಯದಲ್ಲಿ ನಾನು ದಪ್ಪಗಾಗಿದ್ದೆ. ಆದರೆ, ರೇಡಿಯೊ ಜಾಕಿ ಪಾತ್ರ ಮಾಡುವಾಗ ಬೆಂಗಳೂರಿನಲ್ಲಿರುವ ಎಲ್ಲ ರೇಡಿಯೊ ಜಾಕಿಗಳನ್ನು ಭೇಟಿಯಾಗಿದ್ದೆ. ಅವರ ಉಡುಗೆ ತೊಡುಗೆಗಳು ನನ್ನ ಆಕರ್ಷಿಸಿದ್ದವು. ಸಡಿಲವಾದ ಶರ್ಟ್, ಪ್ಯಾಂಟ್ ತೊಡುತ್ತಿದ್ದರು. ಆದರೆ, ದಪ್ಪಗಿದ್ದ ನನಗೆ ಆ ಉಡುಗೆಗಳು ಹೊಂದುತ್ತಿರಲಿಲ್ಲ. ನಂತರ ಸಾಕಷ್ಟು ವರ್ಕೌಟ್ ಮಾಡಿ ತುಂಬಾ ತೆಳ್ಳಗಾಗಿದ್ದೆ. ಆ ಪಾತ್ರದಲ್ಲಿ ನನ್ನನ್ನು ಜನ ಸ್ವೀಕರಿಸಿದ್ದು ಅದ್ಭುತವಾಗಿದ್ದು ಎಂದಿದ್ದಾರೆ.</p><p>ಇಂದಿಗೂ ಕನ್ನಡ ಸಿನಿಪ್ರಿಯರು ಗುನುಗುವಂತ ಅದ್ಭುತ ಹಾಡನ್ನು ನೀಡಿದ್ದ ಸಂಗೀತ ನಿರ್ದೇಶಕ ವಿ ಶ್ರೀಧರ್ ಅವರಿಗೆ, ಹಾಗೂ ನಿರ್ದೇಶಕ ಮುಸ್ಸಂಜೆ ಮಹೇಶ್, ನಟಿ ರಮ್ಯ, ಅನು ಪ್ರಭಾಕರ್ ಸೇರಿದಂತೆ ಚಿತ್ರತಂಡದವನ್ನು, ರೇಡಿಯೊ ಜಾಕಿಗಳನ್ನು ಸುದೀಪ್ ಸ್ಮರಿಸಿಕೊಂಡು ಧನ್ಯವಾದ ಸಲ್ಲಿಸಿದ್ದಾರೆ.</p><p>2008 ಮೇ 16 ರಂದು ಬಿಡುಗಡೆಯಾಗಿದ್ದ ಮುಸ್ಸಂಜೆ ಮಾತು ಸಿನಿಮಾ ಚಿತ್ರರಸಿಕರ ಮನ ಗೆದ್ದಿದ್ದಲ್ಲದೇ ಬಾಕ್ಸ್ ಆಫೀಸ್ನಲ್ಲಿ ಉತ್ತಮ ಗಳಿಕೆ ಕಂಡಿತ್ತು. ನಟ ಸುದೀಪ್ ವೃತ್ತಿ ಜೀವನಕ್ಕೂ ತಿರುವು ಕೊಟ್ಟಿತ್ತು. ಮುಸ್ಸಂಜೆ ಮಹೇಶ್ ನಿರ್ದೇಶಿಸಿದ್ದ ಈ ಸಿನಿಮಾವನ್ನು ಸುರೇಶ್ ಜೈನ್ ನಿರ್ಮಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಚಿತ್ರರಸಿಕರ ಮನ ಗೆದ್ದಿದ್ದ ಮುಸ್ಸಂಜೆ ಮಾತು ಸಿನಿಮಾ ಬಿಡುಗಡೆಯಾಗಿ ಇಂದಿಗೆ 17 ವರ್ಷ ಗತಿಸಿದೆ. ಈ ಹಿನ್ನೆಲೆಯಲ್ಲಿ ನಟ ಸುದೀಪ್ ಮುಸ್ಸಂಜೆ ಮಾತು ಸಿನಿಮಾ ಬಗ್ಗೆ ವಿಶೇಷ ವಿಡಿಯೊ ಹಂಚಿಕೊಂಡಿದ್ದಾರೆ.</p><p>ಮುಸ್ಸಂಜೆ ಮಾತು ಸಿನಿಮಾ ನನ್ನ ವೃತ್ತಿ ಜೀವನದಲ್ಲಿ ದೊಡ್ಡ ಸ್ಥಾನದಲ್ಲಿ ನಿಲ್ಲುವಂತದ್ದು. ವೃತ್ತಿ ಬದುಕಿಗೆ ಹೊಳಪು ನೀಡಿದೆ. ಅಂತಹ ಅದ್ಭುತ ಸಿನಿಮಾ ಬಿಡುಗಡೆಯಾಗಿ 17 ವರ್ಷ ಗತಿಸಿದರೂ ಇಂದಿಗೂ ಏನಾಗಲಿ ಮುಂದೆ ಸಾಗು ನೀ ಹಾಡು ಎಲ್ಲರ ಎದೆಯಾಳದಲ್ಲಿದೆ ಎಂದಿದ್ದಾರೆ.</p><p>ವಿಶೇಷ ಎಂದರೆ ಏನಾಗಲಿ ಮುಂದೆ ಸಾಗು ನೀ ಹಾಡು ನನ್ನ ಅಮ್ಮ ಸಾಯುವವರೆಗೂ ಅವರ ಕಾಲರ್ ಟ್ಯೂನ್ ಆಗಿತ್ತು. ತಂದೆಯದ್ದೂ ಇಂದಿಗೂ ಅದೇ ಕಾಲರ್ ಟ್ಯೂನ್. ಲಕ್ಷಾಂತರ ಮನಸ್ಸುಗಳಿಗೆ ಸ್ಫೂರ್ತಿ ತುಂಬಿದ ಹಾಡಿನಲ್ಲಿ ನಾನು ಅಭಿನಯಿಸಿರುವುದು ನನಗೆ ಹೆಮ್ಮೆ ಮೂಡಿಸುತ್ತದೆ ಎಂದಿದ್ದಾರೆ.</p><p>ಮುಸ್ಸಂಜೆ ಮಾತು ಸಿನಿಮಾ ಶೂಟಿಂಗ್ ಸಮಯದಲ್ಲಿ ನಾನು ದಪ್ಪಗಾಗಿದ್ದೆ. ಆದರೆ, ರೇಡಿಯೊ ಜಾಕಿ ಪಾತ್ರ ಮಾಡುವಾಗ ಬೆಂಗಳೂರಿನಲ್ಲಿರುವ ಎಲ್ಲ ರೇಡಿಯೊ ಜಾಕಿಗಳನ್ನು ಭೇಟಿಯಾಗಿದ್ದೆ. ಅವರ ಉಡುಗೆ ತೊಡುಗೆಗಳು ನನ್ನ ಆಕರ್ಷಿಸಿದ್ದವು. ಸಡಿಲವಾದ ಶರ್ಟ್, ಪ್ಯಾಂಟ್ ತೊಡುತ್ತಿದ್ದರು. ಆದರೆ, ದಪ್ಪಗಿದ್ದ ನನಗೆ ಆ ಉಡುಗೆಗಳು ಹೊಂದುತ್ತಿರಲಿಲ್ಲ. ನಂತರ ಸಾಕಷ್ಟು ವರ್ಕೌಟ್ ಮಾಡಿ ತುಂಬಾ ತೆಳ್ಳಗಾಗಿದ್ದೆ. ಆ ಪಾತ್ರದಲ್ಲಿ ನನ್ನನ್ನು ಜನ ಸ್ವೀಕರಿಸಿದ್ದು ಅದ್ಭುತವಾಗಿದ್ದು ಎಂದಿದ್ದಾರೆ.</p><p>ಇಂದಿಗೂ ಕನ್ನಡ ಸಿನಿಪ್ರಿಯರು ಗುನುಗುವಂತ ಅದ್ಭುತ ಹಾಡನ್ನು ನೀಡಿದ್ದ ಸಂಗೀತ ನಿರ್ದೇಶಕ ವಿ ಶ್ರೀಧರ್ ಅವರಿಗೆ, ಹಾಗೂ ನಿರ್ದೇಶಕ ಮುಸ್ಸಂಜೆ ಮಹೇಶ್, ನಟಿ ರಮ್ಯ, ಅನು ಪ್ರಭಾಕರ್ ಸೇರಿದಂತೆ ಚಿತ್ರತಂಡದವನ್ನು, ರೇಡಿಯೊ ಜಾಕಿಗಳನ್ನು ಸುದೀಪ್ ಸ್ಮರಿಸಿಕೊಂಡು ಧನ್ಯವಾದ ಸಲ್ಲಿಸಿದ್ದಾರೆ.</p><p>2008 ಮೇ 16 ರಂದು ಬಿಡುಗಡೆಯಾಗಿದ್ದ ಮುಸ್ಸಂಜೆ ಮಾತು ಸಿನಿಮಾ ಚಿತ್ರರಸಿಕರ ಮನ ಗೆದ್ದಿದ್ದಲ್ಲದೇ ಬಾಕ್ಸ್ ಆಫೀಸ್ನಲ್ಲಿ ಉತ್ತಮ ಗಳಿಕೆ ಕಂಡಿತ್ತು. ನಟ ಸುದೀಪ್ ವೃತ್ತಿ ಜೀವನಕ್ಕೂ ತಿರುವು ಕೊಟ್ಟಿತ್ತು. ಮುಸ್ಸಂಜೆ ಮಹೇಶ್ ನಿರ್ದೇಶಿಸಿದ್ದ ಈ ಸಿನಿಮಾವನ್ನು ಸುರೇಶ್ ಜೈನ್ ನಿರ್ಮಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>