ಕಿರುತೆರೆ ನಟಿ ಡಾ.ಪೂಜಾ ರಮೇಶ್ ಈ ಹಿಂದೆ ಪೋಷಕ ಪಾತ್ರಗಳಲ್ಲಿ ಅಭಿನಯಿಸಿದ್ದು, ಇದರ ಮುಖಾಂತರ ಪೂರ್ಣ ಪ್ರಮಾಣದ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇವರೊಂದಿಗೆ ವಿ.ಮನೋಹರ್, ಮಿಮಿಕ್ರಿಗೋಪಿ, ಮಜಾಭಾರತ ಚಂದ್ರಪ್ರಭಾ, ಗುರುದೇವ್, ಮದನ್ರಾಜ್, ಮೀರಶ್ರೀ, ಚೈತನ್ಯಶೆಟ್ಟಿ ತಾರಾಬಳಗವಿದೆ. ಸಂಗೀತ ಸಂಯೋಜಕರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಛಾಯಾಗ್ರಹಣ ಅರುಣ್ನಾಗ್, ಸಂಕಲನ ನಾನಿಕೃಷ್ಣ ಅವರದಾಗಿದೆ. ಬೆಂಗಳೂರು, ಮಂಗಳೂರು, ಚಿಕ್ಕಮಗಳೂರು, ಉಡುಪಿ, ಮೂಡಿಗೆರೆ, ಕನಕಪುರ ಕಡೆಗಳಲ್ಲಿ ಅಕ್ಟೋಬರ್ ಕೊನೆಯವಾರದಿಂದ ಚಿತ್ರೀಕರಣ ನಡೆಸಲು ತಂಡವು ಯೋಜನೆ ಹಾಕಿಕೊಂಡಿದೆ.