ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆಟ್ಟೇರಿದ್ದಾರೆ ‘ಎರಡು ಸಾವಿರದ ಇಪ್ಪತ್ತು ಗೋಪಿಕೆಯರು’

Last Updated 29 ಮಾರ್ಚ್ 2021, 13:18 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ನಿವೃತ್ತ ಐ.ಪಿ.ಎಸ್ ಅಧಿಕಾರಿ ಕುಚ್ಚಣ್ಣ ಶ್ರೀನಿವಾಸನ್ ಮತ್ತು ಹಲವು ಸಚಿವರಿಗೆ ಆಪ್ತ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ವಿ.ನಾರಾಯಣಸ್ವಾಮಿ ಈಗ ಚಿತ್ರ ನಿರ್ಮಾಣಕ್ಕೆ ಕೈ ಹಾಕಿದ್ದಾರೆ.

ಕುಚ್ಚಣ್ಣ ಅವರ ನಿರ್ಮಾಣದ ಸಿನಿಮಾವನ್ನು ನಾರಾಯಣ ಸ್ವಾಮಿ ನಿರ್ದೇಶಿಸುತ್ತಿದ್ದಾರೆ. ಚಿತ್ರದ ಹೆಸರು ‘ಎರಡು ಸಾವಿರದ ಇಪ್ಪತ್ತು ಗೋಪಿಕೆಯರು’. ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ರಚನೆಯಲ್ಲಿ ನಿರ್ಮಾಪಕ, ನಿರ್ದೇಶಕ ಇಬ್ಬರೂ ಸೇರಿದ್ದಾರೆ.

1988ರಲ್ಲಿ ವಿ. ನಾರಾಯಣಸ್ವಾಮಿ ಅವರ ನಿರ್ದೇಶನದಲ್ಲಿ ಬಂದ ರಮೇಶ್‌ ಅರವಿಂದ್‌ ನಟನೆಯ ಮೊದಲ ಚಿತ್ರ ‘ಮಧುಮಾಸ’ಕ್ಕೂ ಕುಚ್ಚಣ್ಣ ಕಥೆ, ಸಾಹಿತ್ಯ ಬರೆದಿದ್ದರು. 1993 ರಲ್ಲಿ ‘ಮೋಜಿನ ಮದುವೆ’ ಎಂಬ ಚಲನಚಿತ್ರವನ್ನೂ ಸಹ ವಿ.ನಾರಾಯಣಸ್ವಾಮಿ ಅವರ ನಿರ್ದೇಶನದಲ್ಲಿ, ಕುಚ್ಚಣ್ಣ ಶ್ರೀನಿವಾಸನ್ ಅವರ ಕಥೆ, ಸಾಹಿತ್ಯದಲ್ಲಿ ನಿರ್ಮಾಣಗೊಂಡಿತ್ತು. ‘ಸಮಾಗಮ’ ಎಂಬ ದೂರದರ್ಶನ ಧಾರಾವಾಹಿ ಸೇರಿದಂತೆ ಹಲವು ನಾಟಕಗಳಲ್ಲಿ ಇಬ್ಬರೂ ಜೊತೆಯಾಗಿದ್ದರು. ಇದೀಗ 28 ವರ್ಷಗಳ ನಂತರ ಈ ಜೋಡಿ ಚಿತ್ರ ನಿರ್ಮಾಣಕ್ಕೆ ಮುಂದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT