ಚೆನ್ನೈ: ಆಸ್ಕರ್ ಪ್ರಶಸ್ತಿಗೆ ಅಧಿಕೃತ ಪ್ರವೇಶ ಪಡೆದ ಮಲಯಾಳಂನ ‘2018’ ಚಿತ್ರದ ನಿರ್ದೇಶಕ ಜೂಡ್ ಆ್ಯಂಥನಿ ಜೋಸೆಫ್ ಅವರು ಸೂಪರ್ಸ್ಟಾರ್ ರಜನಿಕಾಂತ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
ಕೇರಳ ಪ್ರವಾಹದ ಕುರಿತಾದ ‘2018– ಎವ್ರಿಒನ್ ಈಸ್ ಎ ಹೀರೋ’ ಚಿತ್ರ 2024ರ ಆಸ್ಕರ ಪ್ರಶಸ್ತಿಯ ಅತ್ಯುತ್ತಮ ಅಂತರರಾಷ್ಟ್ರೀಯ ಚಿತ್ರ ವಿಭಾಗಕ್ಕೆ ಪ್ರವೇಶ ಪಡೆದಿದೆ.
ರಜನಿಕಾಂತ್ ಅವರನ್ನು ಭೇಟಿಯಾಗಿ ಚಿತ್ರದ ಬಗ್ಗೆ ಚರ್ಚಿಸಿ, ಆಶೀರ್ವಾದ ಪಡೆದ ಚಿತ್ರಗಳನ್ನು ಜೋಸೆಫ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.