ಜೂನ್ 5ರಂದು ಮೈಸೂರು ಮೃಗಾಲಯಕ್ಕೆ ಭೇಟಿ ನೀಡಿ ಸಸಿ ನೆಡುವ ಮುಖಾಂತರ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದ್ದ ನಟ ದರ್ಶನ್, ‘ಕೋವಿಡ್ ಮಹಾಮಾರಿಯಿಂದ ಮಾನವಕುಲಕ್ಕೆ ಎಷ್ಟು ತೊಂದರೆ ಆಗಿದೆಯೋ ಅಷ್ಟೇ ತೊಂದರೆ ಪ್ರಾಣಿಸಂಕುಲಕ್ಕೂ ಆಗಿದೆ. ಹೀಗಾಗಿ ಪ್ರಾಣಿ,ಪಕ್ಷಿಗಳನ್ನು ದತ್ತುಪಡೆದು ಪ್ರಾಣಿಸಂಕುಲ ಉಳಿಸಿ, ಮೃಗಾಲಯ ಬೆಳೆಸಿ’ ಎಂದು ಕರೆ ನೀಡಿದ್ದರು.