<p><strong>ಮುಂಬೈ</strong>: ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪತ್ತೆ ಪ್ರಕರಣವು ದಿಢೀರ್ ತಿರುವು ಪಡೆದುಕೊಂಡಿದೆ. ಮಾದಕ ಪದಾರ್ಥ ನಿಯಂತ್ರಣ ಬ್ಯೂರೊದ (ಎನ್ಸಿಬಿ) ಅಧಿಕಾರಿಗಳು ಬಾಲಿವುಡ್ ಸೂಪರ್ಸ್ಟಾರ್ ಶಾರುಕ್ ಖಾನ್ ಅವರಿಂದ ಆರೋಪಿಯಾದ ಅವರ ಮಗ ಆರ್ಯನ್ ಖಾನ್ ಬಿಡುಗಡೆಗೆ ₹25 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಪ್ರಕರಣದ ಸಾಕ್ಷಿಯಾಗಿರುವ ಪ್ರಭಾಕರ ಸೈಲ್ ಹೇಳಿದ್ದಾರೆ.</p>.<p>ಒಂಬತ್ತು ಖಾಲಿ ಹಾಳೆಗಳಿಗೆ ಎನ್ಸಿಬಿ ಅಧಿಕಾರಿಗಳು ತಮ್ಮಿಂದ ಸಹಿ ಹಾಕಿಸಿಕೊಂಡಿದ್ದಾರೆ ಎಂದೂ ಸೈಲ್ ಆರೋಪಿಸಿದ್ದಾರೆ. ಈ ಆರೋಪಗಳನ್ನು ಎನ್ಸಿಬಿ ಅಧಿಕಾರಿಗಳು ಅಲ್ಲಗಳೆದಿದ್ದಾರೆ. ಇವು ಆಧಾರರಹಿತ ಮತ್ತು ದುರುದ್ದೇಶಪೂರಿತ ಆರೋಪ ಎಂದಿದ್ದಾರೆ.</p>.<p>ಎನ್ಸಿಬಿಯ ಪ್ರಾದೇಶಿಕ ನಿರ್ದೇಶಕ ಸಮೀರ್ ವಾಂಖೆಡೆ ಅವರು ಈ ತಿಂಗಳ ಆರಂಭದಲ್ಲಿ ಐಷಾರಾಮಿ ಹಡಗಿನ ಮೇಲೆ ದಾಳಿ ನಡೆಸಿದ್ದರು. ಅಂತರರಾಷ್ಟ್ರೀಯ ಡ್ರಗ್ಸ್ ಜಾಲವನ್ನು ಬಯಲಿಗೆ ಎಳೆದಿರುವುದಾಗಿ ಎನ್ಸಿಬಿ ಹೇಳಿತ್ತು. ಇದೇ 3ರಂದು ಆರ್ಯನ್ ಖಾನ್ ಅವರನ್ನು ಎನ್ಸಿಬಿ ಬಂಧಿಸಿತ್ತು. ಆರ್ಯನ್ ಅವರು ಆರ್ಥರ್ ರೋಡ್ ಜೈಲಿನಲ್ಲಿದ್ದಾರೆ.</p>.<p>ವಿದೇಶದಲ್ಲಿ ಉದ್ಯೋಗ ದೊರಕಿಸಿ ಕೊಡುವ ಕೆ.ಪಿ. ಗೋಸಾವಿ ಎಂಬ ವ್ಯಕ್ತಿ ಪ್ರಕರಣದ ಇನ್ನೊಬ್ಬ ಸಾಕ್ಷಿ. 2018ರ ವಂಚನೆ ಪ್ರಕರಣವೊಂದರಲ್ಲಿ ಗೋಸಾವಿ ವಿರುದ್ಧ ಪುಣೆ ಪೊಲೀಸರು ಇತ್ತೀಚೆಗೆ ಲುಕ್ಔಟ್ ನೋಟಿಸ್ ಹೊರಡಿಸಿದ್ದಾರೆ.</p>.<p>ಎನ್ಸಿಬಿ ಅಧಿಕಾರಿಗಳು, ಗೋಸಾವಿ ಮತ್ತು ಸ್ಯಾಮ್ ಡಿಸೋಜಾ ಎಂಬ ಇನ್ನೊಬ್ಬ ವ್ಯಕ್ತಿ ಸೇರಿ ಶಾರುಖ್ ಖಾನ್ಗೆ ₹25 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಮೊತ್ತ ಕೊಟ್ಟರೆ ಆರ್ಯನ್ ಬಿಡುಗಡೆ ಮಾಡಲಾಗುವುದು ಎಂದಿದ್ದರು ಎಂದು ಸೈಲ್ ಭಾನುವಾರ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪತ್ತೆ ಪ್ರಕರಣವು ದಿಢೀರ್ ತಿರುವು ಪಡೆದುಕೊಂಡಿದೆ. ಮಾದಕ ಪದಾರ್ಥ ನಿಯಂತ್ರಣ ಬ್ಯೂರೊದ (ಎನ್ಸಿಬಿ) ಅಧಿಕಾರಿಗಳು ಬಾಲಿವುಡ್ ಸೂಪರ್ಸ್ಟಾರ್ ಶಾರುಕ್ ಖಾನ್ ಅವರಿಂದ ಆರೋಪಿಯಾದ ಅವರ ಮಗ ಆರ್ಯನ್ ಖಾನ್ ಬಿಡುಗಡೆಗೆ ₹25 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಪ್ರಕರಣದ ಸಾಕ್ಷಿಯಾಗಿರುವ ಪ್ರಭಾಕರ ಸೈಲ್ ಹೇಳಿದ್ದಾರೆ.</p>.<p>ಒಂಬತ್ತು ಖಾಲಿ ಹಾಳೆಗಳಿಗೆ ಎನ್ಸಿಬಿ ಅಧಿಕಾರಿಗಳು ತಮ್ಮಿಂದ ಸಹಿ ಹಾಕಿಸಿಕೊಂಡಿದ್ದಾರೆ ಎಂದೂ ಸೈಲ್ ಆರೋಪಿಸಿದ್ದಾರೆ. ಈ ಆರೋಪಗಳನ್ನು ಎನ್ಸಿಬಿ ಅಧಿಕಾರಿಗಳು ಅಲ್ಲಗಳೆದಿದ್ದಾರೆ. ಇವು ಆಧಾರರಹಿತ ಮತ್ತು ದುರುದ್ದೇಶಪೂರಿತ ಆರೋಪ ಎಂದಿದ್ದಾರೆ.</p>.<p>ಎನ್ಸಿಬಿಯ ಪ್ರಾದೇಶಿಕ ನಿರ್ದೇಶಕ ಸಮೀರ್ ವಾಂಖೆಡೆ ಅವರು ಈ ತಿಂಗಳ ಆರಂಭದಲ್ಲಿ ಐಷಾರಾಮಿ ಹಡಗಿನ ಮೇಲೆ ದಾಳಿ ನಡೆಸಿದ್ದರು. ಅಂತರರಾಷ್ಟ್ರೀಯ ಡ್ರಗ್ಸ್ ಜಾಲವನ್ನು ಬಯಲಿಗೆ ಎಳೆದಿರುವುದಾಗಿ ಎನ್ಸಿಬಿ ಹೇಳಿತ್ತು. ಇದೇ 3ರಂದು ಆರ್ಯನ್ ಖಾನ್ ಅವರನ್ನು ಎನ್ಸಿಬಿ ಬಂಧಿಸಿತ್ತು. ಆರ್ಯನ್ ಅವರು ಆರ್ಥರ್ ರೋಡ್ ಜೈಲಿನಲ್ಲಿದ್ದಾರೆ.</p>.<p>ವಿದೇಶದಲ್ಲಿ ಉದ್ಯೋಗ ದೊರಕಿಸಿ ಕೊಡುವ ಕೆ.ಪಿ. ಗೋಸಾವಿ ಎಂಬ ವ್ಯಕ್ತಿ ಪ್ರಕರಣದ ಇನ್ನೊಬ್ಬ ಸಾಕ್ಷಿ. 2018ರ ವಂಚನೆ ಪ್ರಕರಣವೊಂದರಲ್ಲಿ ಗೋಸಾವಿ ವಿರುದ್ಧ ಪುಣೆ ಪೊಲೀಸರು ಇತ್ತೀಚೆಗೆ ಲುಕ್ಔಟ್ ನೋಟಿಸ್ ಹೊರಡಿಸಿದ್ದಾರೆ.</p>.<p>ಎನ್ಸಿಬಿ ಅಧಿಕಾರಿಗಳು, ಗೋಸಾವಿ ಮತ್ತು ಸ್ಯಾಮ್ ಡಿಸೋಜಾ ಎಂಬ ಇನ್ನೊಬ್ಬ ವ್ಯಕ್ತಿ ಸೇರಿ ಶಾರುಖ್ ಖಾನ್ಗೆ ₹25 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಮೊತ್ತ ಕೊಟ್ಟರೆ ಆರ್ಯನ್ ಬಿಡುಗಡೆ ಮಾಡಲಾಗುವುದು ಎಂದಿದ್ದರು ಎಂದು ಸೈಲ್ ಭಾನುವಾರ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>