ಚಿತ್ರದಲ್ಲಿ ಇತಿಹಾಸವನ್ನು ತಿರುಚಲಾಗಿದೆ ಎಂದು ರಾಜಸ್ತಾನದ ಕೆಲ ಸಂಘಟನೆಗಳು ಆರೋಪಿಸಿದ ಕಾರಣ ವಿವಾದ ಸೃಷ್ಟಿಯಾಗಿತ್ತು. ಚಿತ್ರದ ಕತೆಯು ರಜಪೂತ ರಾಣಿ ಪದ್ಮಾವತಿ ಹಾಗೂ ದೆಹಲಿ ಸುಲ್ತಾನ ಅಲ್ಲಾವುದ್ದೀನ್ ಖಿಲ್ಜಿ ಸುತ್ತ ಸುತ್ತುತ್ತದೆ. ಈ ಚಿತ್ರದ ಪ್ರದರ್ಶನವನ್ನು ನಿಷೇಧಿಸುವಂತೆ ಒತ್ತಾಯಿಸಿ ಗುಜರಾತ್, ಮಹಾರಾಷ್ಟ್ರ, ಬಿಹಾರ, ರಾಜಸ್ತಾನ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರತಿಭಟನೆಗಳು ನಡೆದಿದ್ದವು.