ಸಾಕಷ್ಟು ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸಿರುವ ವಿಶ್ವಾಸ್ ನಾಯಕರಾಗಿ ನಟಿಸುತ್ತಿರುವ ಎರಡನೇ ಚಿತ್ರವಿದು. ಧನ್ಯಶ್ರೀ ನಾಯಕಿಯಾಗಿ ಅಭಿನಯಿಸುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಬಲ ರಾಜವಾಡಿ, ಚಿರಾಯು ಚಕ್ರವರ್ತಿ, ಅಮಿತ್, ಗಿರೀಶ್ ಶಿವಣ್ಣ, ಎಂ.ಎಸ್.ಉಮೇಶ್, ಪದ್ಮಜಾರಾವ್, ಕುರಿಬಾಂಡ್ ರಂಗ, ಮೂಗು ಸುರೇಶ್ ಮುಂತಾದವರಿದ್ದಾರೆ.