ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಸ್ರಿಕಟ್ಟೆ’ ಸಿನಿಮಾದಲ್ಲಿ ಭಯಾನಕ ಜಗತ್ತು! ಯುವ ನಿರ್ದೇಶಕ ವೈಭವ್ ಎಂ ನಿರ್ದೇಶನ

Published 15 ಅಕ್ಟೋಬರ್ 2023, 19:05 IST
Last Updated 15 ಅಕ್ಟೋಬರ್ 2023, 19:05 IST
ಅಕ್ಷರ ಗಾತ್ರ

ಚಿಕ್ಕಮಗಳೂರು ಜಿಲ್ಲೆಯ ‘ಬಸ್ರಿಕಟ್ಟೆ’ ಮಲೆನಾಡಿಗರಿಗೆ ಚಿರಪರಿಚಿತ ಊರು. ಇದೇ ಊರನ್ನು ಶೀರ್ಷಿಕೆಯಾಗಿಸಿಕೊಂಡಿರುವ ಚಿತ್ರದ ಟ್ರೇಲರ್‌ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಯುವ ನಿರ್ದೇಶಕ ವೈಭವ್ ಎಂ ‘ಬಸ್ರಿಕಟ್ಟೆ’ಗೆ ಆ್ಯಕ್ಷನ್ ಕಟ್ ಹೇಳಿದ್ದು, ಗೀತಾಂಜಲಿ ಫಿಲಂಸ್ ಬ್ಯಾನರ್ ಅಡಿಯಲ್ಲಿ ಪ್ರಶಾಂತ್ ಎನ್ ಪೈ ಈ ಚಿತ್ರವನ್ನು ನಿರ್ಮಿಸಿದ್ದಾರೆ.

‘ಸಾಮಾನ್ಯವಾಗಿ ಹಾರರ್ ಸಿನಿಮಾ ಎಂದಾಕ್ಷಣ ಕಾಡು, ಕತ್ತಲೆ, ದೆವ್ವ...ಹೀಗೆ ಅನೇಕ ಅಂಶಗಳು ಕಣ್ಮುಂದೆ ಬರುತ್ತವೆ. ಆದರೆ, ಬಸ್ರಿಕಟ್ಟೆ ಸಿನಿಮಾ ಕೊಂಚ ವಿಭಿನ್ನ. ಸಸ್ಪೆನ್ಸ್- ಹಾರರ್ ಸಿನಿಮಾವಾದರೂ ರಿಯಲಿಸ್ಟಿಕ್ ಆಗಿ ಮೂಡಿಬಂದಿದೆ.ನವೆಂಬರ್ 3 ರಂದು ಸಿನಿಮಾ ತೆರೆ ಕಾಣಲಿದೆ’ ಎಂದರು ನಿರ್ದೇಶಕ ಪ್ರಶಾಂತ್‌. 

‘ಕಿರಗೂರಿನ ಗಯ್ಯಾಳಿಗಳು’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿರುವ ರಾಹುಲ್ ಮಾದೇವ್ ನಾಯಕ. ‘ಮುಂದಿನ ನಿಲ್ದಾಣ’ ಸಿನಿಮಾ ಖ್ಯಾತಿಯ ಅನನ್ಯ ಕಶ್ಯಪ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಬಲರಾಜವಾಡಿ, ಕಿರಣ್ ನಾಯ್ಕ್, ಸಿದ್ಲಿಂಗು ಶ್ರೀಧರ್ ಮುಂತಾದವರು ತಾರಾಗಣದಲ್ಲಿದ್ದಾರೆ. ಅಶ್ವಿನ್ ಕೆನಡಿ ಛಾಯಾಗ್ರಹಣ, ಕದ್ರಿ ಮಣಿಕಾಂತ್ ಸಂಗೀತ ಹಾಗೂ ಉಮೇಶ್ ಸಂಕಲನ ಈ ಚಿತ್ರಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT