<p><strong>ಹೈದರಾಬಾದ್:</strong> ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ತೆಲುಗು ಚಲನಚಿತ್ರ ನಟ ಅಲ್ಲು ಅರ್ಜುನ್ ಅವರ ವ್ಯಾನಿಟಿ ವ್ಯಾನ್ಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದಿದ್ದು, ವಾಹನದಲ್ಲಿದ್ದ ಚಾಲಕ ಮತ್ತು ಅಟೆಂಡೆಂಟ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.</p>.<p>ಶನಿವಾರ ಸತ್ಯನಾರಾಯಣಪುರಂನಲ್ಲಿ ಹಿಂದಿನಿಂದ ಬರುತ್ತಿದ್ದ ಲಾರಿ ವ್ಯಾನ್ಗೆ ಡಿಕ್ಕಿ ಹೊಡೆದಿದ್ದು, ಸಣ್ಣಪುಟ್ಟ ಹಾನಿಯಾಗಿದೆ. ಘಟನೆ ನಡೆದಾಗ ನಟ ಅಥವಾ ಅವರ ಮೇಕಪ್ ತಂಡವೂ ವ್ಯಾನಿಟಿ ವ್ಯಾನ್ನಲ್ಲಿ ಇರಲಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಚಲನಚಿತ್ರದ ಚಿತ್ರೀಕರಣದ ಸ್ಥಳದಿಂದ ಹಿಂತಿರುಗುತ್ತಿದ್ದ ವಾಹನದಲ್ಲಿ ಚಾಲಕನಲ್ಲದೆ, ಒಬ್ಬ ಅಟೆಂಡೆಂಟ್ ಇದ್ದರು. ವ್ಯಾನ್ ಚಾಲಕನ ದೂರಿನ ಆಧಾರದ ಮೇಲೆ, ಕಂಟೇನರ್ ಲಾರಿಯ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p>.<p>ಇತ್ತೀಚೆಗೆ ಮುಂಬರುವ 'ಪುಷ್ಪಾ' ಚಿತ್ರದ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಆಂಧ್ರಪ್ರದೇಶದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ತೆಲುಗು ಚಲನಚಿತ್ರ ನಟ ಅಲ್ಲು ಅರ್ಜುನ್ ಅವರ ವ್ಯಾನಿಟಿ ವ್ಯಾನ್ಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದಿದ್ದು, ವಾಹನದಲ್ಲಿದ್ದ ಚಾಲಕ ಮತ್ತು ಅಟೆಂಡೆಂಟ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.</p>.<p>ಶನಿವಾರ ಸತ್ಯನಾರಾಯಣಪುರಂನಲ್ಲಿ ಹಿಂದಿನಿಂದ ಬರುತ್ತಿದ್ದ ಲಾರಿ ವ್ಯಾನ್ಗೆ ಡಿಕ್ಕಿ ಹೊಡೆದಿದ್ದು, ಸಣ್ಣಪುಟ್ಟ ಹಾನಿಯಾಗಿದೆ. ಘಟನೆ ನಡೆದಾಗ ನಟ ಅಥವಾ ಅವರ ಮೇಕಪ್ ತಂಡವೂ ವ್ಯಾನಿಟಿ ವ್ಯಾನ್ನಲ್ಲಿ ಇರಲಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಚಲನಚಿತ್ರದ ಚಿತ್ರೀಕರಣದ ಸ್ಥಳದಿಂದ ಹಿಂತಿರುಗುತ್ತಿದ್ದ ವಾಹನದಲ್ಲಿ ಚಾಲಕನಲ್ಲದೆ, ಒಬ್ಬ ಅಟೆಂಡೆಂಟ್ ಇದ್ದರು. ವ್ಯಾನ್ ಚಾಲಕನ ದೂರಿನ ಆಧಾರದ ಮೇಲೆ, ಕಂಟೇನರ್ ಲಾರಿಯ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p>.<p>ಇತ್ತೀಚೆಗೆ ಮುಂಬರುವ 'ಪುಷ್ಪಾ' ಚಿತ್ರದ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಆಂಧ್ರಪ್ರದೇಶದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>