ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬರೀಷ್‌ಗೆ ಚಂದನವನದ ಗೌರವ: ಸರಳವಾಗಿ ಹುಟ್ಟುಹಬ್ಬ ಆಚರಿಸಲು ನಟ ದರ್ಶನ್‌ ನಿರ್ಧಾರ

ಅಭಿಮಾನಿಗಳಿಗೆ ಮನವಿ ಮಾಡಿದ ಚಾಲೆಂಜಿಂಗ್ ಸ್ಟಾರ್‌
Last Updated 17 ಜನವರಿ 2019, 7:04 IST
ಅಕ್ಷರ ಗಾತ್ರ

ಬೆಂಗಳೂರು:‘ರೆಬೆಲ್‌ ಸ್ಟಾರ್’ ಅಂಬರೀಷ್‌ ಅವರ ನಿಧನದ ಹಿನ್ನೆಲೆಯಲ್ಲಿ ಚಂದನವನದ ಚಿತ್ರತಾರೆಯರು ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳಲುಮುಂದಾಗುತ್ತಿದ್ದಾರೆ. ‘ರಾಕಿಂಗ್‌ ಸ್ಟಾರ್’ ಯಶ್‌ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದು ಹಳೆಯ ಸುದ್ದಿ.

ಈಗ ‘ಚಾಲೆಂಜಿಂಗ್‌ ಸ್ಟಾರ್‌’ ದರ್ಶನ್‌ ಕೂಡ ಇದೇ ಹಾದಿ ತುಳಿದಿದ್ದಾರೆ. ಫೆಬ್ರುವರಿ 16ಕ್ಕೆ ದರ್ಶನ್ ಅವರು 42ನೇ ವಸಂತಕ್ಕೆ ಕಾಲಿಡಲಿದ್ದಾರೆ. ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳಲು ತೀರ್ಮಾನಿಸಿರುವ ಅವರು, ಈ ಕುರಿತು ತಮ್ಮ ಅಭಿಮಾನಿಗಳಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

‘ಈ ವರ್ಷ ಅಂಬಿ ಅಪ್ಪಾಜಿ ನಮ್ಮನ್ನು ಅಗಲಿ ದೂರವಾದ ಕಾರಣ ನನ್ನ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಬೇಕು ಎಂದು ಕೇಳಿಕೊಳ್ಳುತ್ತೇನೆ. ಬ್ಯಾನರ್, ಕೇಕ್ ಮತ್ತು ಹಾರಗಳನ್ನು ತರಬೇಡಿ’ ಎಂದು ಅಭಿಮಾನಿಗಳಿಗೆ ಟ್ವಿಟರ್‌ನಲ್ಲಿ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT