ಮಾರ್ಚ್ 11ರಂದು ತೆಲುಗಿನಲ್ಲಿ ಚಿತ್ರ ಬಿಡುಗಡೆ ಮಾಡುವುದಾಗಿ ಚಿತ್ರ ತಂಡ ಪ್ರಕಟಿಸಿತ್ತು. ಇದಕ್ಕೆ ಆಂಧ್ರಪ್ರದೇಶದಲ್ಲಿ ತೆಲುಗು ಚಿತ್ರರಂಗದಿಂದ ವಿರೋಧ ವ್ಯಕ್ತವಾಗಿತ್ತು. ಅದೇ ದಿನ ತೆಲುಗಿನ ಎರಡು ಚಿತ್ರಗಳು ಬಿಡುಗಡೆಯಾಗುತ್ತಿರುವ ಕಾರಣಕ್ಕೆ ತೆಲುಗು ಆವೃತ್ತಿಯ ‘ರಾಬರ್ಟ್’ ಚಿತ್ರ ಬಿಡುಗಡೆಗೆ ಆಂಧ್ರದಲ್ಲಿ ಅವಕಾಶ ಕೊಡಬಾರದೆಂದು ಅಲ್ಲಿನ ಚಿತ್ರರಂಗ ನಿರ್ಬಂಧ ಹೇರಿ, ಪ್ರದರ್ಶಕರ ಮೇಲೆ ಒತ್ತಡ ಹಾಕಿತ್ತು. ಈ ಕಾರಣದಿಂದ ಚಿತ್ರದ ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡ ಈ ಸಂಬಂಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರು.