ನಟ ಹಾಗೂ ಅವರ ಸ್ನೇಹಿತರು ಗುರುವಾರ ರಾತ್ರಿ ಬಂಡೀಪುರದಲ್ಲಿ ಸಫಾರಿ ನಡೆಸಿದ್ದಾರೆ ಎನ್ನಲಾದ ವಿಡಿಯೊ ಶುಕ್ರವಾರ ವೈರಲ್ ಆಗಿತ್ತು. ಇದಕ್ಕೆಪರಿಸರ ಪ್ರಿಯರಿಂದ ಆಕ್ರೋಶ ವ್ಯಕ್ತವಾಗಿತ್ತು.
ಈ ಘಟನೆಗೆ ಸಂಬಂಧ ಪ್ರತಿಕ್ರಿಯಿಸಿದ್ದ ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಟಿ.ಬಾಲಚಂದ್ರ ಅವರು, ‘ಬಂಡೀಪುರದಲ್ಲಿ ರಾತ್ರಿ ಸಫಾರಿಗೆ ಅವಕಾಶ ಇಲ್ಲ. ರಾತ್ರಿ ಸಫಾರಿ ನಡೆಸಿರುವುದು ನಿಜವಾದರೆ ಅವರ ವಿರುದ್ಧ ಎಫ್ಐಆರ್ ದಾಖಲಿಸಿ, ಪೊಲೀಸರಿಗೂ ದೂರು ನೀಡಲಾಗುವುದು’ ಎಂದು ಹೇಳಿದ್ದರು.