ನಟ ಗಣೇಶ್ ಮಾತನಾಡಿ, ‘ಪ್ರವಾಹದಿಂದ ರಾಜ್ಯದ ಜನರು ದಿಕ್ಕೆಟ್ಟಿದ್ದಾರೆ. ಅವರ ಬದುಕನ್ನು ಮರುಸೃಷ್ಟಿಸಲು ಸಾಧ್ಯವಾಗದಂತಹ ಸ್ಥಿತಿ ನಿರ್ಮಾಣವಾಗಿದೆ. ಸಂತ್ರಸ್ತರ ನೆರವಿಗೆ ಎಲ್ಲರೂ ಕೈಜೋಡಿಸಬೇಕಿದೆ. ಸ್ವಯಂಸೇವಕರು, ರಾಷ್ಟ್ರೀಯ ವಿಪತ್ತು ಪರಿಹಾರ ಪಡೆಯ ಸಿಬ್ಬಂದಿ ಸಂತ್ರಸ್ತರ ರಕ್ಷಣೆಯಲ್ಲಿ ತೊಡಗಿದ್ದಾರೆ. ಸಾಮಾಜಿಕ ಜಾಲ ತಾಣದಲ್ಲಿ ನನ್ನ ಮನವಿಗೆ ಅಭಿಮಾನಿಗಳೂ ಸ್ಪಂದಿಸಿದ್ದಾರೆ. ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ’ ಎಂದರು.