ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟಿ ಕಂಗನಾ, ಸಿಎಂ ಯೋಗಿ ಆದಿತ್ಯನಾಥ್‌ ಭೇಟಿ: ವಿಷಯ ಏನಿರಬಹುದು?

Last Updated 2 ಮೇ 2022, 6:42 IST
ಅಕ್ಷರ ಗಾತ್ರ

ಲಖನೌ: ಬಾಲಿವುಡ್‌ ಸ್ಟಾರ್‌ ನಟಿ ಕಂಗನಾ ರನೌತ್‌ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರನ್ನು ಭೇಟಿ ಮಾಡಿದ್ದಾರೆ.

ಈ ಭೇಟಿ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದರೂ, ಸಿನಿಮಾ ಪ್ರಚಾರ ಕಾರ್ಯಕ್ರಮಕ್ಕೆ ಯೋಗಿ ಅಧಿತ್ಯನಾಥ್‌ ಅವರನ್ನು ಆಹ್ವಾನಿಸಿರಬಹುದು ಎಂದು ಕಂಗನಾ ಅವರ ಕೆಲ ಅಭಿಮಾನಿಗಳು ಹೇಳುತ್ತಿದ್ದಾರೆ.

ಕಂಗನಾ ಅವರ ಹೊಸ ಚಿತ್ರ ‘ಧಾಕಡ್‌‘ ಶೀಘ್ರದಲ್ಲೇ ಚಿತ್ರಮಂದಿರಗಳಲ್ಲಿ ತೆರೆಗೆ ಬುರುತ್ತಿದ್ದೆ. ಈ ಸಿನಿಮಾದ ಪ್ರಚಾರಕ್ಕಾಗಿ ಕಂಗನಾ ಅವರು ಯೋಗಿ ಅಧಿತ್ಯನಾಥ್‌ ಅವರನ್ನು ಆಹ್ವಾನಿಸಲು ಭೇಟಿ ಮಾಡಿರಬಹುದು ಎಂದು ಕೆಲವರು ಹೇಳುತ್ತಿದ್ದಾರೆ.

ಕಂಗನಾ ಸರ್ಕಾರದ ಕಾರ್ಯಕ್ರಮವೊಂದರ ವಿಚಾರಕ್ಕಾಗಿ ಸಿಎಂ ಅವರನ್ನು ಭೇಟಿ ಮಾಡಿದ್ದಾರೆ ಎಂದು ಮತ್ತೆ ಕೆಲವರು ಹೇಳುತ್ತಿದ್ದಾರೆ. ಉತ್ತರ ಪ್ರದೇಶ ಸರ್ಕಾರದ ‘ಒಂದು ಜಿಲ್ಲೆ, ಒಂದು ಉತ್ಪನ್ನ‘ ಕಾರ್ಯಕ್ರಮದ ರಾಯಭಾರಿಯಾಗಿ ಕಂಗನಾ ಕೆಲಸ ಮಾಡುತ್ತಿದ್ದಾರೆ. ಈ ವಿಚಾರವಾಗಿಸಿಎಂ ಯೋಗಿಯನ್ನು ಭೇಟಿ ಮಾಡಿದ್ದಾರೆ ಎನ್ನಲಾಗಿದೆ.

ಕಂಗನಾ ಬಿಜೆಪಿ ಪಕ್ಷ ಸೇರಲಿದ್ದು, ರಾಜಕೀಯದಲ್ಲಿನ ಸ್ಥಾನ ಮಾನಕ್ಕಾಗಿ ಯೋಗಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರಬಹುದು ಎಂದು ಕೇಳುತ್ತಿದ್ದಾರೆ.

ಒಟ್ಟಿನಲ್ಲಿ ಕಂಗನಾ, ಯೋಗಿ ಅದಿತ್ಯನಾಥ್‌ ಭೇಟಿ ಸಾಮಾಜಿಕ ಮಾಧ್ಯಮಗಳಲ್ಲಿ ಬಿಸಿಬಿಸಿ ಚರ್ಚೆಗೆ ಗ್ರಾಸವಾಗಿದೆ. ಸದ್ಯ ಕಂಗನಾ ಧಾಕಡ್‌ ಸಿನಿಮಾದ ಬ್ಯುಸಿಯಲ್ಲಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT