‘ಶೂರ ಸಿಂಧೂರ ಲಕ್ಷ್ಮಣ’ ಚಿತ್ರದ ಸುದ್ದಿಗೋಷ್ಠಿ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನಗೆ ಅರ್ಜುನ್ ಸರ್ಜಾ ಅವರ ಮೇಲೆ ಅಪಾರ ಗೌರವವಿದೆ. ಅವರೊಟ್ಟಿಗೆ ಕೆಲಸ ಮಾಡಿದ್ದೇನೆ. ಆದರೆ, ಶ್ರುತಿ ಹರಿಹರನ್ ಮತ್ತು ಅರ್ಜುನ್ ಸರ್ಜಾ ಅವರ ನಡುವೆ ‘ವಿಸ್ಮಯ’ ಚಿತ್ರದ ಶೂಟಿಂಗ್ ವೇಳೆ ಏನು ನಡೆದಿದೆ ಎಂಬುದು ನನಗೆ ಗೊತ್ತಿಲ್ಲ. ಘಟನೆಯ ಸತ್ಯಾಸತ್ಯತೆಯ ಪರಿಶೀಲನೆ ನಡೆಯಲಿ. ಶ್ರುತಿ ತಮ್ಮ ಅಭಿಪ್ರಾಯ ಹೇಳಿದ್ದಾರೆ. ಅದು ಆಕೆಯ ಹಕ್ಕು. ನಮಗೆ ಕೇಳಿಸಿಕೊಳ್ಳುವ ತಾಳ್ಮೆ ಇರಬೇಕು. ಅದಕ್ಕೆ ಅಡ್ಡಿಪಡಿಸುವುದು ಸರಿಯಲ್ಲ’ ಎಂದು ಹೇಳಿದರು.